ನವದೆಹಲಿ: ಚೀನಾದಂತಹ ಕೆಟ್ಟ ನೆರೆಹೊರೆಯ ದೇಶದಿಂದ ಆಮದನ್ನು ಹೇಗೆ ಕಡಿಮೆ ಮಾಡುವುದು ಎಂಬುದರ ಕುರಿತು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ವಾಣಿಜ್ಯ ಸಚಿವಾಲಯದಿಂದ ಸಲಹೆಗಳನ್ನು ಕೋರಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. ಚೀನಾದೊಂದಿಗಿನ ರಾಜತಾಂತ್ರಿಕ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ಪೂರ್ವ ಲಡಾಕ್ನಲ್ಲಿನ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ಚೀನಾದ ಮೇಲೆ ಹೆಚ್ಚು ರಾಜತಾಂತ್ರಿಕ ಮತ್ತು ಆರ್ಥಿಕ ಒತ್ತಡ ಹೇರಲು ನರೇಂದ್ರ ಮೋದಿ ಕೈಗೊಂಡ ಕ್ರಮಗಳ ಒಂದು ಭಾಗ ಆಮದು ಕಡಿತ. ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಮತ್ತು ಹಲವು ಚೀನಾದ ಸೈನಿಕರು ಕೊಲ್ಲಲ್ಪಟ್ಟಿದ್ದಾರೆ.
ವರದಿಗಳ ಪ್ರಕಾರ, ಚೀನಾದಿಂದ ಆಮದು ಮಾಡಿಕೊಳ್ಳುವ ಕಡಿಮೆ ಮಾಡುವ ಕ್ರಮಗಳ ಬಗ್ಗೆ ಪಿಎಂಒ ವಾಣಿಜ್ಯ ಸಚಿವಾಲಯದೊಂದಿಗೆ ಚರ್ಚೆ ನಡೆಸಿದೆ. ಇತರ ದೇಶಗಳ ಮುಕ್ತ ವ್ಯಾಪಾರ ಒಪ್ಪಂದದ (ಎಫ್ಟಿಎ) ವಿಷಯವನ್ನು ಪಿಎಂಒ ಪರಿಶೀಲಿಸಿದೆ.
ಇತರ ದೇಶಗಳಿಂದ ಎಫ್ಟಿಎ ಹೆಸರಿನಲ್ಲಿ ದೇಶದೊಳಗೆ ಅಗ್ಗದ ವಸ್ತುಗಳನ್ನು ತಂದು ತುಂಬಿಸುವುದನ್ನು ತಡೆಯಲು ಸರ್ಕಾರ ಎಫ್ಟಿಎಯನ್ನು ನಿರಂತರವಾಗಿ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇಂತಹ ಸನ್ನಿವೇಶದಲ್ಲಿ, ” ಆತ್ಮನಿರ್ಭರ ಭಾರತ ” ಅಭಿಯಾನಕ್ಕೆ ಇನ್ನಷ್ಟು ಉತ್ತೇಜನ ತುಂಬುವ ಸಲುವಾಗಿ ಮುಂದಿನ ದಿನಗಳಲ್ಲಿ ಇನ್ನೂ ಹಲವು ದೇಶಗಳಿಂದ ಆಮದನ್ನು ಕಡಿಮೆ ಮಾಡಲು ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆಯಿದೆ.
ದಕ್ಷಿಣ ಕೊರಿಯಾ, ಮಲೇಷ್ಯಾ, ಸಿಂಗಾಪುರ ಸೇರಿದಂತೆ ಆಸಿಯಾನ್ ದೇಶಗಳಿಂದ ಸರಕುಗಳ ಆಮದನ್ನು ಕೂಡ ಸರ್ಕಾರ ಪರಿಶೀಲಿಸುತ್ತಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.