ನವದೆಹಲಿ: ಕೇಂದ್ರ ಸರ್ಕಾರ ಮಾಡಿರುವ ಕೃಷಿ ಸುಧಾರಣೆಗಳು ರೈತರು ಬೆಳೆದ ಉತ್ಪಾದನೆಗೆ ಸರಿಯಾದ ಬೆಲೆ ಒದಗಿಸಲಿದೆ ಮತ್ತು ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯಲ್ಲೂ ಪೂರಕವಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಮಾಹಿತಿ ನೀಡಿದ್ದಾರೆ.
ಉತ್ತರ ಪ್ರದೇಶದ ಬದೌನ್ನ ದತ್ತಗಂಜ್ನಲ್ಲಿ ಕೃಷಿ ವಿಜ್ಞಾನ ಕೇಂದ್ರದ ಆಡಳಿತ ಕಟ್ಟಡಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಭೂಮಿಪೂಜೆ ನೆರವೇರಿಸಿ ತೋಮರ್ ಮಾತನಾಡಿದರು.
ಕೇಂದ್ರ ಸರ್ಕಾರ ಕೃಷಿ ಸಂಬಂಧಿತ ವಿಚಾರದಲ್ಲಿ ಅನೇಕ ಮಹತ್ವದ ಸುಧಾರಣೆಗಳನ್ನು ರೈತ ಸ್ನೇಹಿಯಾಗಿ ಜಾರಿಗೊಳಿಸಿದೆ. ದೇಶದ ಯಾವುದೇ ಭಾಗದಲ್ಲಿಯೂ ರೈತ ಯಾವುದೇ ನಿರ್ಬಂಧವಿಲ್ಲದೆ ತಾನು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡುವುದಕ್ಕೂ ಅನುವು ಮಾಡಿಕೊಡಲಾಗಿದೆ. ಎಪಿಎಂಸಿ ಹೊರತಾಗಿಯೂ ಬೆಳೆ ಮಾರಾಟಕ್ಕೆ ಕೃಷಿಕರಿಗೆ ಅವಕಾಶವನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ತೋಮರ್ ಹೇಳಿದ್ದಾರೆ.
ಉತ್ಪನ್ನಗಳ ಬೆಲೆ ಭರವಸೆಯನ್ನು ರೈತರಿಗೆ ನೀಡಲಾಗಿದೆ. ವ್ಯಾಪಾರಿಗಳ ಜೊತೆಗಿನ ಒಪ್ಪಂದ ಹಾಗೂ ರೈತರ ಉತ್ಪಾದನೆಗೆ ಸರಿಯಾದ ಬೆಲೆ ಒದಗಿಸುವ ಭರವಸೆಯನ್ನೂ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಸುಮಾರು 86%ರಷ್ಟು ಸಣ್ಣ ಮತ್ತು ಅಲ್ಪ ಪ್ರಮಾಣದ ಕೃಷಿಕರಿದ್ದು, ಅವರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳು ದೊರೆಯುವ ನಿಟ್ಟಿನಲ್ಲಿಯೂ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.
ರೈತ ಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಕೃಷಿ ವಿಜ್ಞಾನ ಕೇಂದ್ರದ ಕಾರ್ಯವನ್ನು ತೋಮರ್ ಶ್ಲಾಘಿಸಿದ್ದಾರೆ. ರೈತರ ಭೂಮಿಯಲ್ಲಿನ ಮಣ್ಣಿನ ಗುಣಮಟ್ಟ ಪರೀಕ್ಷೆ, ಅತಿಯಾದ ಕೀಟನಾಶಕಗಳ ಬಳಕೆಯನ್ನು ತಡೆಯುವುದು, ನೀರಾವರಿ ವ್ಯವಸ್ಥೆ ಅಭಿವೃದ್ಧಿ, ರೈತರ ಬೆಳೆ ಹೆಚ್ಚಿಸಲು ಪರಿಹಾರೋಪಾಯಗಳನ್ನು ತಿಳಿಸಿಕೊಡುವಲ್ಲಿ ಕೃಷಿ ವಿಜ್ಞಾನ ಕೇಂದ್ರ ಮಹತ್ವದ ಪಾತ್ರ ವಹಿಸುತ್ತಿದೆ ಎಂದೂ ತೋಮರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.