ನವದೆಹಲಿ: ಕೊರೋನಾ ಪ್ರಕರಣಗಳ ವಿಚಾರದಲ್ಲಿ ಜಾಗತಿಕ ಮಟ್ಟದಲ್ಲಿ ದಶಲಕ್ಷ ಜನಸಂಖ್ಯೆಗೆ ಸಂಬಂಧಿಸಿದಂತೆ ಭಾರತವು ಅತೀ ಕಡಿಮೆ ಸೋಂಕಿತರನ್ನು ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆಯ ವರದಿಯ ಪ್ರಕಾರ ಪ್ರತಿ ಮಿಲಿಯನ್ ಜನಸಂಖ್ಯೆಗೆ ಅನುಗುಣವಾಗಿ ಭಾರತದಲ್ಲಿ 505 ರಷ್ಟು ಜನರಿಗೆ ಸೋಂಕು ತಗುಲಿದೆ. ಜಗತ್ತಿಗೆ ಸಂಬಂಧಿಸಿದಂತೆ ಮಿಲಿಯನ್ ಗೆ 1453 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಿರುವುದಾಗಿ ತಿಳಿದು ಬಂದಿದೆ.
ಚಿಲಿ ದೇಶದಲ್ಲಿ ಪ್ರತಿ ಮಿಲಿಯನ್ ಜನಸಂಖ್ಯೆಗೆ 15,459 ಕೊರೋನಾ ಸೋಂಕಿತರಿದ್ದಾರೆ. ಅಮೆರಿಕಾದಲ್ಲಿ 8500, ಬ್ರೆಜಿಲ್ ನಲ್ಲಿ 7419 ಕ್ಕೂ ಹೆಚ್ಚು ಮತ್ತು ಸ್ಪೇನ್ ನಲ್ಲಿ 5358 ಮಂದಿ ಪ್ರತಿ ಮಿಲಿಯನ್ ಜನಸಂಖ್ಯೆಗೆ ಕೊರೋನಾ ಸೋಂಕಿತರಿರುವುದಾಗಿಯೂ ವಿಶ್ವಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ. ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿರುವಂತೆ ಭಾರತದಲ್ಲಿಯೇ ಅತೀ ಕಡಿಮೆ ಕೊರೋನಾ ಸಾವಿನ ಸಂಖ್ಯೆಯನ್ನು ಹೊಂದಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಭಾರತದಲ್ಲಿ ಸಾವಿನ ಪ್ರಮಾಣ 14% ರಷ್ಟಿದ್ದರೆ, ಜಗತ್ತಿಗೆ ಸಂಬಂಧಿಸಿದಂತೆ ಇತರ ದೇಶಗಳಲ್ಲಿ ಸಾವಿನ ಸಂಖ್ಯೆ ಇದರ ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ತಿಳಿಸಿದೆ.
ಭಾರತದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಲಾಗಿದೆ. ಆಮ್ಲಜನಕ, ಐಸಿಯು, ವೆಂಟಿಲೇಟರ್, ಆಕ್ಸಿಮೀಟರ್, ಅಗತ್ಯ ಪಿಪಿಇ ಸೌಲಭ್ಯಗಳನ್ನು ಹೆಚ್ಚಿಸಲಾಗಿದೆ. ಕೊರೋನಾಗೆಂದೇ ಪ್ರತ್ಯೇಕ ಚಿಕಿತ್ಸೆ ನೀಡಲು 1200 ಆಸ್ಪತ್ರೆಗಳು, 2611 ಕೋವಿಡ್ ಆರೋಗ್ಯ ಕೇಂದ್ರಗಳು, ಗಂಭೀರ ಪ್ರಮಾಣದಲ್ಲಿ ಸೋಂಕಿಗೆ ತುತ್ತಾಗಿರುವವರ ಚಿಕಿತ್ಸೆಗಾಗಿ 9909 ಕೊರೋನಾ ಆರೈಕೆ ಕೇಂದ್ರ ಆರಂಭಿಸಲಾಗಿದೆ. ಕೊರೋನಾ ಸೋಂಕನ್ನು ಆರಂಭದಲ್ಲೇ ಪತ್ತೆ ಹಚ್ಚಿ, ಪರಿಣಾಮಕಾರಿ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಯೂ ಭಾರತ ಪರಿಣಾಮಕಾರಿ ಕ್ರಮಗಳನ್ನು ಅನುಸರಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 15,515 ಕೊರೋನಾ ರೋಗಿಗಳು ಗುಣಮುಖರಾಗಿದ್ದಾರೆ. ಆ ಮೂಲಕ 4,30,000 ಕ್ಕಿಂತ ಅಧಿಕ ಜನರು ದೇಶದಲ್ಲಿ ಕೊರೋನಾ ಮುಕ್ತರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಂಘಟಿತ ಪ್ರಯತ್ನದ ಫಲವಾಗಿ ದೇಶದಲ್ಲಿ ಕೊರೋನಾ ಹತೋಟಿಯಲ್ಲಿದೆ. ಪ್ರಸ್ತುತ 3,59,000 ಕ್ಕಿಂತ ಹೆಚ್ಚಿನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ದೇಶದಲ್ಲಿ ದಿನಕ್ಕೆ 2 ಲಕ್ಷಕ್ಕೂ ಅಧಿಕ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದೂ ಸಚಿವಾಲಯ ಮಾಹಿತಿ ನೀಡಿದ್ದಾರೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.