ಬೆಂಗಳೂರು: ಕೊರೋನಾದಿಂದಾಗಿ ಶಾಲಾ ಕಾಲೇಜುಗಳಿನ್ನೂ ಆರಂಭವಾಗಿಲ್ಲ. ಕೊರೋನಾ ಕರಿನೆರಳು ಶಿಕ್ಷಣ ಕ್ಷೇತ್ರದ ಮೇಲೂ ಬಿದ್ದಿದೆ. ಈ ನಡುವೆ ಶಾಲಾರಂಭ ಮಾಡದೇ ಇದ್ದರೂ, ರಾಜ್ಯದಲ್ಲಿ ಆನ್ಲೈನ್ ಶಿಕ್ಷಣ ಜಾರಿಗೊಳಿಸುವ ಬಗ್ಗೆ ಮಾತುಕತೆಗಳು ನಡೆಯುತ್ತಲೇ ಇವೆ. ಬಹಳ ಹಿಂದಿನಿಂದಲೇ ಈ ಬಗ್ಗೆ ಪರ ವಿರೋಧಗಳು ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ವರದಿ ನೀಡುವಂತೆ ತಜ್ಞರ ತಂಡಕ್ಕೆ ಸೂಚಿಸಿತ್ತು. ಇದೀಗ ತಜ್ಞರ ವರದಿ ನೀಡಿದ್ದು ಆನ್ಲೈನ್ ಶಿಕ್ಷಣ ಆರಂಭವಾಗುತ್ತದೆ ಎಂಬ ವಿಚಾರವನ್ನು ಮಾಧ್ಯಮಗಳ ವರದಿ ಬೆನ್ನಲ್ಲೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಆನ್ಲೈನ್ ತರಗತಿಗಳು ಆರಂಭದ ಕುರಿತಂತೆ ರಾಜ್ಯ ಸರ್ಕಾರ ಇನ್ನೂ ಯಾವುದೇ ರೀತಿಯ ಕ್ರಮ ತೆಗೆದುಕೊಂಡಿಲ್ಲ. ತಜ್ಞರು ವರದಿ ನೀಡಿದ್ದಾರಷ್ಟೇ. ಈ ಬಗ್ಗೆ ಹೈಕೋರ್ಟ್ ವಿಚಾರಣೆ ಮುಗಿಸಿದ್ದು, ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ. ಈ ನಡುವೆ ಸರ್ಕಾರ ಯಾವ ನಿರ್ಧಾರವನ್ನೂ ತೆಗೆದುಕೊಂಡಿಲ್ಲ. ತಜ್ಞರ ವರದಿ ಸರ್ಕಾರದ ನಿರ್ಧಾರವಲ್ಲ. ಆದ್ದರಿಂದ, ಈ ಕುರಿತಂತೆ ಸುಳ್ಳು ಸುದ್ದಿಗಳನ್ನು ನಂಬದಂತೆ ಅವರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಸುರೇಶ್ ಕುಮಾರ್, ಶಾಲಾರಂಭದ ಬಗ್ಗೆ ಯಾವುದೇ ನಿರ್ಧಾರವನ್ನು ಸರ್ಕಾರ ಕೈಗೊಂಡಿಲ್ಲ. ಆ ಯೋಚನೆ ಸದ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದೂ ಸ್ಪಷ್ಟನೆ ನೀಡಿದ್ದಾರೆ. ಆದರೂ ಸುಳ್ಳು ಮಾಹಿತಿಗಳು ಹರಡುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳು ಅನಗತ್ಯ ಗೊಂದಲಗಳನ್ನು ಸೃಷ್ಟಿಸದಂತೆಯೂ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.