ನವದೆಹಲಿ: ಉತ್ತರಪ್ರದೇಶದಲ್ಲಿ ಕಳೆದ ವಾರ ಎಂಟು ಪೊಲೀಸರನ್ನು ಹತ್ಯೆ ಮಾಡಿದ್ದ ನಟೋರಿಯಸ್ ಗ್ಯಾಂಗ್ಸ್ಟರ್ ವಿಕಾಸ್ ದುಬೆಯನ್ನು ಇಂದು ಮಧ್ಯಪ್ರದೇಶದಲ್ಲಿ ಬಂಧನಕ್ಕೆ ಒಳಪಡಿಸಲಾಗಿದೆ. ಈತನ ಬಂಧನಕ್ಕಾಗಿ ಕಳೆದ ಒಂದು ವಾರಗಳಿಂದ ಮೂರು ರಾಜ್ಯಗಳಲ್ಲಿ ಪೊಲೀಸರು ತೀವ್ರ ಕಾರ್ಯಾಚರಣೆಯನ್ನು ನಡೆಸಿದ್ದರು.
ವಿಕಾಸ್ ದುಬೆ ಉಜ್ಜೈನಿಯಲ್ಲಿ ಸಿಕ್ಕಿಬಿದ್ದಿದ್ದಾನೆ. ಇದೇ ಸಂದರ್ಭದಲ್ಲಿ ಉತ್ತರಪ್ರದೇಶದಲ್ಲಿ ನಡೆದ ಎರಡು ಪ್ರತ್ಯೇಕ ಎನ್ಕೌಂಟರ್ನಲ್ಲಿ ಆತನ ಇಬ್ಬರು ಸಹಚರರನ್ನು ವಧೆ ಮಾಡಲಾಗಿದೆ. ಆತನರ ಆಪ್ತ ಸಹಾಯಕ ಅಮನ್ ದುಬೆ ನಿನ್ನೆ ಕೊಲ್ಲಲ್ಪಟ್ಟಿದ್ದಾನೆ.
ವಿಕಾಸ್ ದುಬೆ ಅನ್ನು ಬಂಧಿಸಲು ಕಾನ್ಪುರದ ಚೌಬೆಪುರ್ ಪ್ರದೇಶದ ಬಿಕ್ರು ಗ್ರಾಮಕ್ಕೆ ದೊಡ್ಡ ತಂಡದೊಂದಿಗೆ ಪೊಲೀಸರು ತೆರಳಿದ್ದ ವೇಳೆ ಈತ ಗುಂಡಿನ ಸುರಿಮಳೆಗೈದು ಎಂಟು ಮಂದಿ ಪೊಲೀಸರನ್ನು ಕೊಂದು ಹಾಕಿದ್ದ. ಈ ಭಯಾನಕ ಕೃತ್ಯದ ಬಳಿಕ ಆತ ತಲೆಮರೆಸಿಕೊಂಡಿದ್ದ. ಈತನಿಗಾಗಿ ತೀವ್ರ ಶೋಧ ಕಾರ್ಯ ನಡೆಸಲಾಗಿತ್ತು, ಈತನ ಬಗ್ಗೆ ಮಾಹಿತಿ ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನಗಳನ್ನೂ ಘೋಷಣೆ ಮಾಡಲಾಗಿತ್ತು.
ದುಬೆ ವಿರುದ್ಧ ಕೊಲೆ, ಅಪಹರಣ, ಸುಲಿಗೆ ಮತ್ತು ಗಲಭೆ ಸೇರಿದಂತೆ 60 ಕ್ರಿಮಿನಲ್ ಪ್ರಕರಣಗಳು ಇವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.