ನವದೆಹಲಿ: ಉಜ್ವಲ ಫಲಾನುಭವಿಗಳಿಗೆ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನಾ”ದ ಅಡಿಯಲ್ಲಿ ನೀಡಲಾಗುತ್ತಿರುವ ಪ್ರಯೋಜನಗಳನ್ನು ಜುಲೈ 1ರಿಂದ ಜಾರಿಗೆ ಅನ್ವಯವಾಗುವಂತೆ ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಣೆ ಮಾಡಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.
ಉಜ್ವಲ ಫಲಾನುಭವಿಗಳಿಗೆ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನಾ”ಯ ಪ್ರಯೋಜನಗಳನ್ನು ಜುಲೈ1ರಿಂದ ಜಾರಿಗೆ ಬರುವಂತೆ ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಿಸುವಂತೆ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಮಂಡಿಸಿದ ಪ್ರಸ್ತಾಪಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯು ತನ್ನ ಅನುಮೋದನೆಯನ್ನು ನೀಡಿತು.
ಜಾಗತಿಕ ಸಾಂಕ್ರಾಮಿಕ ಕೊರೋನಾದ ಕಾರಣದಿಂದ ತೊಂದರೆ ಅನುಭವಿಸುತ್ತಿರುವ ಬಡವರು ಮತ್ತು ಅಗತ್ಯವಿರುವವರಿಗೆ ಭದ್ರತೆಯನ್ನು ಒದಗಿಸುವ ಉದ್ದೇಶದಿಂದ ಸರಕಾರವು “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನಾ” ಎಂಬ ಪರಿಹಾರ ಪ್ಯಾಕೇಜನ್ನು ಘೋಷಿಸಿತ್ತು. ಈ ಪ್ಯಾಕೇಜ್ ಅಡಿಯಲ್ಲಿ ಉಜ್ಚಲ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲವನ್ನು ನೀಡಲಾಗುತ್ತಿದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನಾ-ಉಜ್ವಲ ಅಡಿಯಲ್ಲಿ ಎಪ್ರಿಲ್ 1ರಿಂದ ಮೂರು ತಿಂಗಳ ಕಾಲ ಉಚಿತವಾಗಿ ಅಡುಗೆ ಅನಿಲ ಮರುಪೂರಣವನ್ನು ಒದಗಿಸಲು ನಿರ್ಧರಿಸಲಾಗಿತ್ತು.
ಈ ಯೋಜನೆ ಅಡಿಯಲ್ಲಿ , 2020 ರ ಏಪ್ರಿಲ್ –ಜೂನ್ ತಿಂಗಳ ಅವಧಿಯಲ್ಲಿ ಉಜ್ವಲ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ 9709.86 ಕೋಟಿ ರೂಪಾಯಿಗಳನ್ನು ನೇರ ವರ್ಗಾವಣೆ ಮಾಡಲಾಗಿತ್ತು ಮತ್ತು 11.97 ಕೋಟಿ ಅನಿಲ ಸಿಲಿಂಡರ್ಗಳನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನಾ ಫಲಾನುಭವಿಗಳಿಗೆ ಪೂರೈಸಲಾಗಿತ್ತು. ಈ ಯೋಜನೆಯು ಕೊರೊನಾವೈರಸ್ ಜಾಗತಿಕ ಸಾಂಕ್ರಾಮಿಕ ಉಂಟು ಮಾಡಿದ ಅವ್ಯವಸ್ಥೆ ಮತ್ತು ಬಾಧೆಗಳನ್ನು ನಿವಾರಣೆ ಮಾಡುವಲ್ಲಿ ಬಹಳ ಪ್ರಮುಖ ಪಾತ್ರವನ್ನು ವಹಿಸಿತ್ತು.
ಇದೀಗ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಇನ್ನೂ ಮೂರು ತಿಂಗಳು ಕಾಲ ಉಚಿತ ಅಡುಗೆ ಅನಿಲ ಒದಗಿಸುವ ಯೋಜನೆಯನ್ನು ವಿಸ್ತರಿಸುವಂತೆ ಮಾಡಿರುವ ಪ್ರಸ್ತಾಪಕ್ಕೆ ಸಂಪುಟವು ತನ್ನ ಅನುಮೋದನೆ ನೀಡಿದೆ. ಇದರಿಂದ ಉಜ್ವಲ ಫಲಾನುಭವಿಗಳಿಗೆ ಸಾಕಷ್ಟು ಪ್ರಯೋಜನವಾಗಲಿದೆ.
ಉಜ್ವಲ ಫಲಾನುಭವಿಗಳು ಇನ್ನು ಮುಂದೆ ಸೆಪ್ಟೆಂಬರ್ 30 ರವರೆಗೆ ಮರುಪೂರಣ ಮಾಡಲಾದ ಅಡುಗೆ ಅನಿಲಗಳನ್ನು ಉಚಿತವಾಗಿ ಪಡೆದುಕೊಳ್ಳಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.