ನವದೆಹಲಿ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕೇಂದ್ರ ಸರ್ಕಾರ ನಿರ್ಮಿಸಿರುವ 6 ಸೇತುವೆಗಳನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಲೋಕಾರ್ಪಣೆ ಮಾಡಿದರು.
ವಿಡಿಯೋ ಕಾನ್ಫರೆನ್ಸ್ ಮೂಲಕ ರಕ್ಷಣಾ ಸಚಿವರು ಸೇತುವೆ ಉದ್ಘಾಟನೆ ನಡೆಸಿದರು. ಅಕ್ನುರ್- ಪಲನ್ವಾಲಾ ರಸ್ತೆಯ ಸಮೀಪದ ನಾಲ್ಕು ಸೇತುವೆಗಳು ಮತ್ತು ಕತ್ವಾದ ತರನ್ಹ ನಲ್ಹ ಪ್ರದೇಶದಲ್ಲಿ ಎರಡು ಸೇತುವೆಗಳನ್ನು ಕೇಂದ್ರ ಸರ್ಕಾರ ನಿರ್ಮಾಣ ಮಾಡಿತ್ತು. ಗಡಿ ರಸ್ತೆಗಳ ಸೇತುವೆ ನಿರ್ಮಾಣ ಕಾರ್ಯವನ್ನು ಬಿಆರ್ಒ(ಗಡಿ ರಸ್ತೆಗಳ ನಿರ್ಮಾಣ ಸಂಸ್ಥೆ) ಮಾಡಿದೆ. ಒಟ್ಟು 43 ಕೋಟಿ ರೂ. ವೆಚ್ಚದಲ್ಲಿ ಈ ಸೇತುವೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಜೊತೆಗೆ ಗಡಿ ಗಳ ಆಸುಪಾಸಿನಲ್ಲಿರುವ ಹಿಂದುಳಿದಿರುವ ಗ್ರಾಮಗಳ ಅಭಿವೃದ್ಧಿ ಯತ್ತಲೂ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತದೆ ಎಂದು ತಿಳಿಸಿದ್ದಾರೆ.
ದೇಶದ ಗಡಿ ಭಾಗಗಳಲ್ಲಿನ ಮೂಲ ಸೌಕರ್ಯಗಳು, ಅಗತ್ಯ ಸೌಲಭ್ಯಗಳನ್ನು ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿಯೂ ಕೇಂದ್ರದ ಮೋದಿ ಸರ್ಕಾರ ಗಮನ ಹರಿಸುತ್ತಿದೆ. ರಸ್ತೆ ಸೌಕರ್ಯ, ಅಗತ್ಯ ಸಂಪನ್ಮೂಲ ಗಳ ಅಭಿವೃದ್ಧಿ ಕುರಿತಾಗಿಯೂ ಸರ್ಕಾರ ಗಮನ ವಹಿಸುತ್ತದೆ. ಈಗಾಗಲೇ ಸಾವಿರ ಕಿಲೋಮೀಟರ್ ಉದ್ದದ ರಸ್ತೆ ನಿರ್ಮಾಣ ಕಾರ್ಯವೂ ಪ್ರಗತಿಯಲ್ಲಿದ್ದು, ಗಡಿ ಪ್ರದೇಶಗಳ ಮೂಲ ಸೌಕರ್ಯಗಳ ಸಮಸ್ಯೆಯನ್ನು ನಿವಾರಿಸುವಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಸೇನಾ ಪಡೆಗಳ ಮುಖ್ಯಸ್ಥ ಜನರಲ್ ಎಂ. ಎಂ. ನರವಾಣೆ, ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಸೇರಿದಂತೆ ಇನ್ನಿತರ ಗಣ್ಯರು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.