News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದಲ್ಲಿ ಗುತ್ತಿಗೆ ವೈದ್ಯರನ್ನು ಖಾಯಂಗೊಳಿಸಲು ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು : ಕೊರೋನಾ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ದುಡಿಯುತ್ತಿರುವ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರುಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅವರನ್ನು ಖಾಯಂ ಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಆದೇಶ ಹೊರಡಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ ಅವರು, ವೈದ್ಯರುಗಳು ಸರ್ಕಾರಕ್ಕೆ ಸಲ್ಲಿಸಿರುವ ಸೇವಾ ಅವಧಿಯನ್ನು ಪರಿಗಣಿಸಿಕೊಂಡು ಈ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ವೈದ್ಯರುಗಳ ಸೇವೆಗೆ ಪ್ರತಿ 6 ತಿಂಗಳುಗಳಿಗೊಮ್ಮೆ 2.5 ಗ್ರೇಸ್ ಅಂಕವನ್ನು ನೀಡಲಾಗುತ್ತದೆ. ನೇಮಕಾತಿಗೆ ಸಂಬಂಧಿಸಿದಂತೆ ವಯೋಮಿತಿಯನ್ನು 26 ವರ್ಷಗಳಿಗೆ ಏರಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಇದಲ್ಲದೆ ಈ ಸಭೆಯಲ್ಲಿ ಇನ್ನೂ ಹಲವು ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದೂ ಅವರು ಹೇಳಿದ್ದಾರೆ. ಖಾಸಗಿ ಸಂಸ್ಥೆಗಳ ಸೇವೆಯನ್ನು ಬಳಸಿಕೊಳ್ಳುವ ಮುಖೇನ ಹೂಡಿಕೆದಾರರಿಗೆ ಪ್ರೋತ್ಸಾಹ, 5 ವಿದ್ಯುತ್ ಸರಬರಾಜು ಸಂಸ್ಥೆಗಳಿಗೆ 2500 ಕೋಟಿ ರೂ.ಗಳ ಬಡ್ಡಿ ರಹಿತ ಸಾಲ ಸೌಲಭ್ಯ, ಮೈಸೂರು ಎಲೆಕ್ಟ್ರಿಕ್ ಮತ್ತು ಕರ್ನಾಟಕ ವಿದ್ಯುತ್ ಕಾರ್ಖಾನೆಗಳನ್ನು ಇಂಧನ ಇಲಾಖೆಯ ವ್ಯಾಪ್ತಿಗೊಳಪಡಿಸುವುದು ಸೇರಿದಂತೆ ಇನ್ನಿತರ ಮುಖ್ಯ ಬದಲಾವಣೆಗಳಿಗೂ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಎಪಿಎಂಸಿ ಗಳಲ್ಲಿ ಸಂಗ್ರಹಿಸಲಾಗುತ್ತಿದ್ದ ಸೆಸ್ ಅನ್ನು 1.5% ದಿಂದ 1% ಇಳಿಕೆ ಮಾಡಲಾಗಿದೆ. ರಾಯಚೂರಿನಲ್ಲಿ ಐಐಟಿ ಸ್ಥಾಪನೆಗೂ ನಿರ್ಧಾರ ಕೈಗೊಳ್ಳಲಾಗಿದೆ. ವಿಜಯಪುರದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹಣದಲ್ಲಿ ಮೊದಲ ಕಂತು 95 ಕೋಟಿ ರೂ. ಹಣ ಬಿಡುಗಡೆಗೆ ಸಂಪುಟ ಅಸ್ತು ಎಂದಿದೆ. ಜೊತೆಗೆ ಲೋಕಾಯುಕ್ತ ಕಾಯ್ದೆಯಲ್ಲಿಯೂ ಕೆಲವೊಂದು ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿಯೂ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top