ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ಪರಾರಿಯಾಗಲು ಯತ್ನಿಸಿದ ಕುಖ್ಯಾತ ದರೋಡೆಕೋರ ವಿಕಾಸ್ ದುಬೆ ಎಂಬಾತನನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಎನ್ಕೌಂಟರ್ ಮಾಡಿ ಹತ್ಯೆಗೈದಿದೆ. ಮಧ್ಯಪ್ರದೇಶದ ಉಜ್ಜೈನಿಯಿಂದ ಈತನನ್ನು ಉತ್ತರಪ್ರದೇಶ ಎಸ್ಟಿಎಫ್ ವಾಹನವು ಕಾನ್ಪುರಕ್ಕೆ ಕರೆ ತರುತ್ತಿದ್ದ ವೇಳೆ ಭಾರಿ ಮಳೆಯಿಂದಾಗಿ ಪಲ್ಟಿಯಾದ ಸಂದರ್ಭದಲ್ಲಿ ವಿಕಾಸ್ ದುಬೆ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎಂದು ಹೇಳಲಾಗಿದೆ.
ಅಪಘಾತದ ನಂತರ ಯುಪಿ ಎಸ್ಟಿಎಫ್ ಸಿಬ್ಬಂದಿ ವಿಕಾಸ್ ದುಬೆನನ್ನು ಬೆನ್ನಟ್ಟಿದರು, ಒಬ್ಬರ ಸರ್ವಿಸ್ ರಿವಾಲ್ವರ್ ಅನ್ನು ಕೂಡ ಈತ ಕಸಿದುಕೊಂಡಿದ್ದ ಎಂದು ಹೇಳಲಾಗಿದೆ. ಈ ವೇಳೆ ಗುಂಡಿನ ಚಕಮಕಿ ನಡೆದಿದ್ದು ಸ್ಥಳದಲ್ಲಿಯೇ ದರೋಡೆಕೋರನನ್ನು ಕೊಲ್ಲಲಾಯಿತು. ದುಬೆನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಆತನನ್ನು ಸತ್ತಿದ್ದಾನೆ ಎಂದು ಘೋಷಿಸಿದರು.
ರಸ್ತೆ ಅಪಘಾತದ ನಂತರ ಪರಾರಿಯಾಗಲು ಯತ್ನಿಸಿದಾಗ ದರೋಡೆಕೋರ ವಿಕಾಸ್ ದುಬೆ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ ಎಂದು ಕಾನ್ಪುರದ ಐಜಿ ಮೋಹಿತ್ ಅಗರ್ವಾಲ್ ಹೇಳಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇಂದು ಘಟನೆ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ.
ಎನ್ಕೌಂಟರ್ನಲ್ಲಿ ಇಬ್ಬರು ಇನ್ಸ್ಪೆಕ್ಟರ್ಗಳು ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆ. ನಾಲ್ವರು ಪೊಲೀಸ್ ಸಿಬ್ಬಂದಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಇತ್ತೀಚಿಗಷ್ಟೇ ದುಬೆ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿ ಪಾರಾರಿಯಾಗಿದ್ದ, ಒಂದು ವಾರಗಳ ತೀವ್ರ ಶೋಧ ಕಾರ್ಯಾಚರಣೆಯ ಬಳಿಕ ಉಜ್ಜೈನಿಯಲ್ಲಿ ಪತ್ತೆಯಾಗಿದ್ದ. ಸುಮಾರು 60 ಪ್ರಕರಣಗಳಲ್ಲಿ ಈತ ಅಪರಾಧಿಯಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.