ಶ್ರೀನಗರ: ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಿನ ಹಿಮಾಲಯದ ಅಮರನಾಥ ಯಾತ್ರೆಗೆ ತೆರಳುವ ಯಾತ್ರಿಕರಿಗೆ ಸಂಬಂಧಿಸಿದಂತೆ ಮಹತ್ವದ ನಿಲುವೊಂದನ್ನು ಸರ್ಕಾರ ಪ್ರಕಟಿಸಿದೆ. ಈ ಬಾರಿ ಕೊರೋನಾ ಸಾಂಕ್ರಾಮಿಕ ಸೋಂಕಿನ ಕಾರಣದಿಂದಾಗಿ ದಿನಕ್ಕೆ ಕೇವಲ 500 ಜನರಿಗಷ್ಟೇ ಅಮರನಾಥನಿರುವ ಗುಹೆಗೆ ಪ್ರವೇಶ ನೀಡಲು ತೀರ್ಮಾನಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿಗಳು, ಜುಲೈ 21ರಿಂದ ಆರಂಭಿಸಿದಂತೆ ಅಮರನಾಥ ಯಾತ್ರೆಗೆ ಅವಕಾಶ ಒದಗಿಸಿಕೊಡುವ ಸಾಧ್ಯತೆಗಳಿವೆ. ಆದರೆ ಪಹಲ್ಗಾಂಗೆ ತೆರಳುವ ಹಾದಿಯಲ್ಲಿ ಮಂಜುಗಡ್ಡೆಗಳು ತುಂಬಿದ್ದು, ಆ ದಾರಿಯನ್ನು ಇನ್ನೂ ತೆರೆಯಲಾಗಿಲ್ಲ. ಯಾತ್ರಿಗಳು ಬಲ್ಟಾಲ್ ಹಾದಿಯಲ್ಲಿ ಯಾತ್ರೆಯನ್ನು ಸಂಪೂರ್ಣಗೊಳಿಸಲು ಅನುಮತಿ ನೀಡಲಾಗುವುದು ಎಂದೂ ತಿಳಿಸಿದ್ದಾರೆ.
ವೈಷ್ಣೋದೇವಿ ದೇವಾಲಯಕ್ಕೆ ಸಂಬಂಧಿಸಿದಂತೆ ಜುಲೈ 31ರವರೆಗೆ ಈ ದೇವಾಲಯಕ್ಕೆ ಭಕ್ತರ ಆಗಮನವನ್ನು ನಿರ್ಬಂಧಿಸಲಾಗಿದೆ. ಈ ನಿರ್ಬಂಧ ತೆರವಾದ ಬಳಿಕವೂ ಮೊದಲಿಗೆ ಇಲ್ಲಿನ ಸ್ಥಳೀಯರಿಗಷ್ಟೇ ದೇವಾಲಯಕ್ಕೆ ಹೋಗಲು ಅನುಮತಿ ನೀಡಲಾಗುತ್ತದೆ. ಆ ಬಳಿಕ ಉಳಿದ ಯಾತ್ರಾರ್ತಿಗಳಿಗೆ ಕೊರೋನಾ ಪರಿಸ್ಥಿತಿಯನ್ನು ಅವಲೋಕಿಸಿಕೊಂಡು ಅನುಮತಿ ನೀಡುವ ಬಗ್ಗೆ ಚಿಂತಿಸಲಾಗುವುದು ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕೇಂದ್ರಾಡಳಿತ ಪ್ರದೇಶ ಜಮ್ಮು ಕಾಶ್ಮೀರದಲ್ಲಿ 9000ರಷ್ಟು ಜನರು ಸಾಂಕ್ರಾಮಿಕ ಪಿಡುಗು ಕೊರೋನಾ ಪಾಸಿಟಿವ್ಗೆ ತುತ್ತಾಗಿದ್ದಾರೆ. ಈವರೆಗೆ ಸುಮಾರು 145ಕ್ಕೂ ಅಧಿಕ ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಸೋಂಕು ನಿಯಂತ್ರಣಕ್ಕಾಗಿ ಅಧಿಕಾರಿಗಳು ಹೆಚ್ಚಿನ ಕ್ರಮಗಳನ್ನು ಅನುಸರಿಸುತ್ತಿದ್ದಾರೆ ಎಂದೂ ಸಂಬಂಧಿತ ಮೂಲಗಳು ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.