ನವದೆಹಲಿ: ‘ಒನ್ ನೇಷನ್, ಒನ್ ರೇಷನ್ ಕಾರ್ಡ್’ ಯೋಜನೆ ಮುಂದಿನ ವರ್ಷದ ಜನವರಿಯೊಳಗೆ ಭಾರತದಾದ್ಯಂತ ಅನುಷ್ಠಾನಕ್ಕೆ ಬರಲಿದೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಪುನರುಚ್ಛರಿಸಿದ್ದಾರೆ.
ಜನವರಿ 2021ರೊಳಗೆ ಬಾಕಿ ಇರುವ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ʼಒಂದು ರಾಷ್ಟ್ರ, ಒಂದು ರೇಷನ್ ಕಾರ್ಡ್ʼ ಅಡಿಗೆ ಸೇರಿಸಲು ಸಚಿವಾಲಯ ಪ್ರಯತ್ನಿಸುತ್ತಿದೆ ಎಂದು ಪಾಸ್ವಾನ್ ಹೇಳಿದ್ದಾರೆ. ಈ ಹಿಂದೆ ಅನೇಕ ರಾಜ್ಯಗಳು ನಿಧಾನಗತಿಯ ನೆಟ್ವರ್ಕ್ ಸಂಪರ್ಕಕ್ಕೆ ಸಂಬಂಧಿಸಿದ ಸವಾಲುಗಳನ್ನು ಎತ್ತಿ ತೋರಿಸಿದ್ದವು ಎಂದು ಅವರು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ತಾನು ದೂರಸಂಪರ್ಕ ಇಲಾಖೆಯೊಂದಿಗೆ (ಡಿಒಟಿ) ಚರ್ಚೆ ನಡೆಸಿದ್ದಾಗಿ, ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಒಂದು ವರ್ಷದ ಅವಧಿಗೆ ಉಚಿತ ನೆಟ್ವರ್ಕ್ ಸಂಪರ್ಕವನ್ನು ನೀಡುವ ಪ್ರಸ್ತಾಪವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಆತ್ಮ ನಿರ್ಭರ ಭಾರತ ಅಭಿಯಾನ’ ಯೋಜನೆಯಡಿ ಸಮತೋಲಿತ ಆಹಾರ ಧಾನ್ಯಗಳನ್ನು ಆಗಸ್ಟ್ 31, 2020 ರವರೆಗೆ ವಿತರಿಸಲಾಗುವುದು ಎಂದು ಸಚಿವರು ಹೇಳಿದರು.
ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆವೈ) ಯನ್ನು 2020 ರ ನವೆಂಬರ್ವರೆಗೆ ಇನ್ನೂ ಐದು ತಿಂಗಳು ವಿಸ್ತರಿಸುವ ಪ್ರಧಾನಿ ನರೇಂದ್ರ ಮೋದಿಯವರ ನಿರ್ಧಾರವನ್ನು ಅವರು ಸ್ವಾಗತಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.