ನವದೆಹಲಿ: ದೇಶದಲ್ಲಿ ಕೋವಿಡ್ -19 ರೋಗಿಗಳ ಚೇತರಿಕೆಯ ಪ್ರಮಾಣವು ಸುಮಾರು 63% ರಷ್ಟಿದ್ದರೆ, ಮರಣ ಪ್ರಮಾಣ ಕೇವಲ 2.72% ರಷ್ಟಿದೆ. ದೇಶದಲ್ಲಿ ಕೋವಿಡ್-19 ಪರಿಸ್ಥಿತಿ ಸುಧಾರಿಸುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಇಂದು ಹೇಳಿದ್ದಾರೆ.
ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಬಗ್ಗೆ ಸರ್ಕಾರವು ಹೆಚ್ಚಿನ ಕಾಳಜಿ ವಹಿಸುತ್ತಿದೆ, ಆದರೆ ಈ ಬಗ್ಗೆ ಯಾವುದೇ ಆತಂಕವಿಲ್ಲ ಮತ್ತು ಭಾರತದ ಜನಸಂಖ್ಯೆಗೆ ಹೋಲಿಸಿ ಇದನ್ನು ಸರಿಯಾದ ದೃಷ್ಟಿಕೋನದಲ್ಲಿ ನೋಡಬೇಕು ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.
“ಭಾರತದ ಕೋವಿಡ್-19 ಚೇತರಿಕೆ ದರವು 63% ರಷ್ಟಿದೆ, ಮರಣ ಪ್ರಮಾಣ ಕೇವಲ 2.72% ಆಗಿದೆ. ಗರಿಷ್ಠ ಪರೀಕ್ಷೆಗಳನ್ನು ನಡೆಸಿ ಸೋಂಕು ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ನಾವು ಕಾರ್ಯೋನ್ಮೂಖರಾಗಿದ್ದೇವೆ ”ಎಂದಿದ್ದಾರೆ.
ಪ್ರತಿದಿನ ಸುಮಾರು 2.7 ಲಕ್ಷ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಹರ್ಷವರ್ಧನ್ ಹೇಳಿದ್ದಾರೆ.
ಇಷ್ಟು ದೊಡ್ಡ ದೇಶವಾಗಿದ್ದರೂ, ಕೋವಿಡ್-19 ಸಮುದಾಯ ಪ್ರಸರಣ ಹಂತವನ್ನು ತಲುಪಿಲ್ಲ. ಕೆಲವು ಪ್ರದೇಶಗಳಲ್ಲಿ ಸಮುದಾಯ ಪ್ರಸರಣ ಇದ್ದರೂ ಸ್ಥಳೀಯವಾಗಿ ಇದು ಸ್ವಲ್ಪ ಹೆಚ್ಚಿನ ಪ್ರಸರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಭಾರತವು 26,502 ಕ್ಕೂ ಹೆಚ್ಚು ಹೊಸ ಕರೋನವೈರಸ್ ಪ್ರಕರಣಗಳು ಮತ್ತು 475 ಸಾವುಗಳನ್ನು ದಾಖಲಿಸಿದೆ. ಒಟ್ಟು 21,604 ಸಾವುಗಳು ಇದುವರೆಗೆ ಭಾರತದಲ್ಲಿ ದಾಖಲಾಗಿದೆ, ಒಟ್ಟು ಪ್ರಕರಣಗಳ ಸಂಖ್ಯೆ ಎಂಟು ಲಕ್ಷಕ್ಕೆ ತಲುಪಿದೆ ಎಂದು ಆರೋಗ್ಯ ಸಚಿವಾಲಯಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.