ಬೆಂಗಳೂರು: ಇಂದಿನಿಂದ ತೊಡಗಿದಂತೆ ರಾಜ್ಯದಲ್ಲಿ ಆಂಟಿಜೆನ್ ಪರೀಕ್ಷೆಯನ್ನು ಅಗತ್ಯತೆಗೆ ಅನುಗುಣವಾಗಿ ನಡೆಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪರೀಕ್ಷಾ ಕಿಟ್ ಗಳು ಲಭ್ಯವಿದ್ದು, ಅವುಗಳಲ್ಲಿ 50 ಸಾವಿರ ಪರೀಕ್ಷೆಗಳನ್ನು ಬೆಂಗಳೂರಿನಲ್ಲಿ ಮತ್ತು ಉಳಿದಂತೆ 50 ಸಾವಿರ ಪರೀಕ್ಷೆಗಳನ್ನು ರಾಜ್ಯದ ಇತರ ಭಾಗಗಳಲ್ಲಿ ನಡೆಸಲಾಗುತ್ತದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ಮೊದಲ ಹಂತದಲ್ಲಿ ನಗರದಲ್ಲಿ 20 ಸಾವಿರ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ. ಕೊರೋನಾ ಸೋಂಕಿನಿಂದಾಗಿ ಮರಣವನ್ನಪ್ಪುವವರ ಸಂಖ್ಯೆ ಕಡಿಮೆ. ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಮಾರಕ ಕೊರೋನಾ ಗುಣಪಡಿಸಲು ಸಾಧ್ಯ. ಹೀಗಿದ್ದರೂ,ಸಾವುಗಳು ಸಂಭವಿಸುತ್ತಿದೆ. ಇದರ ಬಗ್ಗೆ ಕೂಲಂಕುಶವಾಗಿ ಪರಿಶೀಲನೆ ನಡೆಸಿ, ಪರಿಣಾಮಕಾರಿ ಕ್ರಮ ಕೈಗೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.
ಕೊರೋನಾ ಸೋಂಕಿತರಿಗೆ ಇನ್ನಿತರ ಕಾಯಿಲೆಗಳಿದ್ದಾಗ, ವೃದ್ಧರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿ ಸಾವುಗಳು ಸಂಭವಿಸುವ ಪ್ರಮಾಣ ಹೆಚ್ಚಾಗಿದೆ. ಈ ವರೆಗೆ ಮೃತಪಟ್ಟವರಲ್ಲಿಯೂ ಹೆಚ್ಚಿನವರು ವೃದ್ಧರು, ಮತ್ತು ಇನ್ನಿತರ ಕಾಯಿಲೆಗಳಿದ್ದವರು ಎಂಬುದೂ ತಿಳಿದು ಬಂದಿದ್ದು, ಈ ಹಿನ್ನೆಲೆಯಲ್ಲಿ ಜನರಲ್ಲಿ ಆರೋಗ್ಯ ಕಾಳಜಿ ವಹಿಸುವಂತೆ ಎಚ್ಚರಿಕೆ ಮೂಡಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.