ನವದೆಹಲಿ: ಲಾಕ್ಡೌನ್ ಸಡಿಲಿಸಿದ ನಂತರ ಭಾರತದ ಆರ್ಥಿಕತೆಯು ಸಹಜ ಸ್ಥಿತಿಗೆ ಮರಳುವ ಲಕ್ಷಣಗಳನ್ನು ತೋರಿಸಲಾರಂಭಿಸಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಶನಿವಾರ ಹೇಳಿದ್ದಾರೆ. ಲಾಕ್ಡೌನ್ ಹಂತದಲ್ಲಿ ಆರ್ಬಿಐನ ಕಾರ್ಯತಂತ್ರಗಳ ಬಗ್ಗೆ ಮಾತನಾಡಿದ ಅವರು, ನಮ್ಮ ಹಣಕಾಸು ವ್ಯವಸ್ಥೆಯನ್ನು ರಕ್ಷಿಸಲು, ಪ್ರಸ್ತುತ ಬಿಕ್ಕಟ್ಟಿನಲ್ಲಿ ಆರ್ಥಿಕತೆಯನ್ನು ಬೆಂಬಲಿಸಲು ಆರ್ಬಿಐ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು.
ಶನಿವಾರ 7ನೇ ಎಸ್ಬಿಐ ಬ್ಯಾಂಕಿಂಗ್ ಮತ್ತು ಅರ್ಥಶಾಸ್ತ್ರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ಹೊಸ ಹೊಸ ಅಪಾಯಗಳನ್ನು ಗುರುತಿಸಲು ಆರ್ಬಿಐ ತನ್ನ ಆಫ್ಸೈಟ್ ಕಣ್ಗಾವಲು ಕಾರ್ಯವಿಧಾನವನ್ನು ಬಲಪಡಿಸಿದೆ” ಎಂದು ಅವರು ಹೇಳಿದ್ದಾರೆ. ಮಧ್ಯಮ ಅವಧಿಗೆ ಆರ್ಬಿಐ ನೀತಿ ಕ್ರಮಗಳು ಬಿಕ್ಕಟ್ಟಿನ ಸಂದರ್ಭದಲ್ಲಿ ಸಮರ್ಪಕ ಮೌಲ್ಯಮಾಪನಕ್ಕೆ ಒಳಗಾಗಬೇಕಿದೆ ಎಂದಿದ್ದಾರೆ.
ಸಾಲದ ಹರಿವನ್ನು ಖಚಿತಪಡಿಸಿಕೊಳ್ಳಲು ಆರ್ಬಿಐ ಬಫರ್ಗಳನ್ನು ನಿರ್ಮಿಸುವುದರ ಮೇಲೆ ಗಮನ ಕೇಂದ್ರೀಕರಿಸಿದೆ, ಇದು ಹಣಕಾಸು ವ್ಯವಸ್ಥೆಯಲ್ಲಿ ಸ್ಥಿತಿಸ್ಥಾಪಕತ್ವವನ್ನು ಹೆಚ್ಚಿಸಲು ಬಂಡವಾಳವನ್ನು ಹೆಚ್ಚಿಸುತ್ತದೆ ಎಂದು ಆರ್ಬಿಐ ಗವರ್ನರ್ ಮತ್ತಷ್ಟು ಒತ್ತಿ ಹೇಳಿದರು.
ಭಾರತೀಯ ಆರ್ಥಿಕತೆ ಪ್ರಸ್ತುತ ಸಹಜ ಸ್ಥಿತಿಯತ್ತ ಮರಳುತ್ತಿದೆ, ಮುಂದಿನ ದಿನಗಳಲ್ಲಿ ವೇಗ ಪಡೆಯಲಿದೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.