ನವದೆಹಲಿ: ರಾಜಸ್ಥಾನದ ಕಾಂಗ್ರೆಸ್ ಆಡಳಿತದಲ್ಲಿ ಬಿರುಗಾಳಿ ಎದ್ದಿದೆ. ಕಾಂಗ್ರೆಸ್ಸಿನ ಯುವ ನಾಯಕ, ಉಪ ಮುಖ್ಯಮಂತ್ರಿ ಸಚಿನ್ ಪೈಲೆಟ್ ಅವರು ಬಂಡಾಯದ ಬಾವುಟವನ್ನು ಹಾರಿಸಿದ್ದಾರೆ. ಹೀಗಾಗಿ ಅಶೋಕ್ ಗೆಹ್ಲೋಟ್ ಅವರ ಸರ್ಕಾರ ಅತಂತ್ರ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಮತ್ತೊಂದು ದೊಡ್ಡ ರಾಜ್ಯವನ್ನು ಕಳೆದುಕೊಳ್ಳುವ ಭೀತಿ ಕಾಂಗ್ರೆಸ್ಗೆ ಶುರುವಾಗಿದೆ.
200 ಸದಸ್ಯ ಬಲವುಳ್ಳ ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತವಿದೆ. ಒಂದು ವೇಳೆ ಕಾಂಗ್ರೆಸ್ ಸರ್ಕಾರ ಅಲ್ಲಸಂಖ್ಯೆಗೆ ಕುಸಿಯಬೇಕಾದರೆ ಅಲ್ಲಿನ ಕನಿಷ್ಠ 30 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಬೇಕಾದ ಅಗತ್ಯವಿದೆ.
ಬಂಡಾಯ ಎದ್ದಿರುವ ಸಚಿನ್ ಪೈಲೆಟ್ ಅವರು ಈಗಾಗಲೇ 16 ಶಾಸಕರೊಂದಿಗೆ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ.
ಇನ್ನೊಂದೆಡೆ ನಮ್ಮ ಸರ್ಕಾರಕ್ಕೆ 109 ಶಾಸಕರ ಬಲವಿದೆ, ಈಗಾಗಲೇ ಇವರು ಬೆಂಬಲವಿರುವ ಬಗ್ಗೆ ಸಹಿ ಹಾಕಿದ್ದಾರೆ ಎಂದು ಸರ್ಕಾರ ಹೇಳಿಕೊಂಡಿದೆ. ಇನ್ನೂ ಕೆಲ ಶಾಸಕರು ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದಿದೆ.
ಇಂದು ಶಾಸಕಾಂಗ ಪಕ್ಷದ ಸಭೆಗೆ ಹಾಜರಾಗುವಂತೆ ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿಗೊಳಿಸಲಾಗಿದೆ. ವೈಯಕ್ತಿಕ ಅಥವಾ ವಿಶೇಷ ಕಾರಣವಿಲ್ಲದೆ ಸಭೆಗೆ ಗೈರಾದರೆ ಕಠಿಣ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ನೀಡಲಾಗಿದೆ.
ರಾಜಸ್ಥಾನದಲ್ಲಿ 200 ಸ್ಥಾನಗಳ ಪೈಕಿ ಕಾಂಗ್ರೆಸ್ 107 ಸ್ಥಾನಗಳನ್ನು ಹೊಂದಿದೆ. ಬಿಜೆಪಿ 72 ಸ್ಥಾನಗಳನ್ನು ಹೊಂದಿದೆ. ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿ 3, ಸಿಪಿಐ 2, ಭಾರತೀಯ ಟ್ರೈಬಲ್ ಪಾರ್ಟಿ 2, ರಾಷ್ಟ್ರೀಯ ಲೋಕ ದಳ 1, ಸ್ವತಂತ್ರರು 13 ಸ್ಥಾನಗಳನ್ನು ಹೊಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.