ಕೋಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ ದಿನಾಜ್ಪುರ ಜಿಲ್ಲೆಯ ಹೆಮತಾಬಾದ್ನ ಬಿಜೆಪಿ ಶಾಸಕ ದೇಬೇಂದ್ರ ನಾಥ್ ರಾಯ್ ಅವರು ಸೋಮವಾರ ಬೆಳಿಗ್ಗೆ ತಮ್ಮ ಹಳ್ಳಿ ಮನೆಯ ಸಮೀಪವಿರುವ ಬಿಂದಾಲ್ ಗ್ರಾಮದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಅವರನ್ನು ಕೊಂದು ನಂತರ ನೇಣಿಗೆ ಹಾಕಲಾಯಿತು ಎಂದು ಶಾಸಕರ ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರದೇಶದ ಜನರು ಕೂಡ ಇದನ್ನೇ ಹೇಳುತ್ತಿದ್ದಾರೆ. ಆದರೆ, ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ಕಾರಣವನ್ನು ಕಂಡುಹಿಡಿಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರಾಯ್ಗುಂಜ್ ಆಸ್ಪತ್ರೆಗೆ ಕಳುಹಿಸಲಾಗಿದೆ.
“ಉತ್ತರ ದಿನಾಜ್ಪುರದ ಹೆಮತಾಬಾದ್ನ ಬಿಜೆಪಿ ಶಾಸಕರಾದ ದೇಬೇಂದ್ರ ನಾಥ್ ರೇ ಅವರ ದೇಹವು ಅವರ ಹಳ್ಳಿಯ ಮನೆಯ ಸಮೀಪವಿರುವ ಬಿಂದಾಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರನ್ನು ಮೊದಲು ಕೊಂದು ನಂತರ ನೇಣಿಗೆ ಹಾಕಲಾಗಿದೆ ಎಂಬ ಬಗ್ಗೆ ಜನರು ಸ್ಪಷ್ಟ ಅಭಿಪ್ರಾಯ ಹೊಂದಿದ್ದಾರೆ. 2019 ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು “ಎಂದು ಪಶ್ಚಿಮ ಬಂಗಾಳ ಬಿಜೆಪಿ ಟ್ವೀಟ್ನಲ್ಲಿ ತಿಳಿಸಿದೆ.
ಬಿಜೆಪಿ ಮುಖಂಡ ರಾಹುಲ್ ಸಿನ್ಹಾ ಈ ಘಟನೆಯ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ ಮತ್ತು ರಾಯ್ ಸಾವಿನಲ್ಲಿ ತೃಣಮೂಲ ಕಾಂಗ್ರೆಸ್ ಭಾಗಿಯಾಗಿದೆ ಎಂದು ಆರೋಪಿಸಿದ್ದಾರೆ. “ಹತ್ಯೆಯ ಹಿಂದಿನ ಸತ್ಯವನ್ನು ಕಂಡುಹಿಡಿಯಲು ಸಿಬಿಐ ತನಿಖೆಗೆ ಆದೇಶಿಸುವಂತೆ ನಾನು ಪಶ್ಚಿಮ ಬಂಗಾಳ ಸಿಎಂಗೆ ವಿನಂತಿಸುತ್ತೇನೆ” ಎಂದು ಆಗ್ರಹಿಸಿದ್ದಾರೆ.
ರಾಯ್ ಈ ಹಿಂದೆ ಸಿಪಿಐ (ಎಂ) ಶಾಸಕರಾಗಿದ್ದರು ಆದರೆ 2019ರಲ್ಲಿ ಬಿಜೆಪಿಗೆ ಸೇರಿದ್ದರು. ರಾಯ್ ಅವರು ಬಿಜೆಪಿಯ ಹಿರಿಯ ನಾಯಕರ ಸಮ್ಮುಖದಲ್ಲಿ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಜೆ.ಪಿ ನಡ್ಡಾ ಸೇರಿದಂತೆ ಹಲವಾರು ಮಂದಿ ಈ ಘಟನೆಯನ್ನು ಖಂಡಿಸಿದ್ದಾರೆ.
This is absolutely atrocious, heinous and plain inhuman.
Mamata Bannerjee’s blood hungry politics is a blot on India’s constitutional democracy. https://t.co/h62taBS58n
— Tejasvi Surya (@Tejasvi_Surya) July 13, 2020
The suspected heinous killing of Debendra Nath Ray, BJP MLA from Hemtabad in West Bengal, is extremely shocking and deplorable. This speaks of the Gunda Raj & failure of law and order in the Mamta govt. People will not forgive such a govt in the future. We strongly condemn this.
— Jagat Prakash Nadda (@JPNadda) July 13, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.