ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಮತ್ತೆ ಐದು ತಿಂಗಳುಗಳ ಕಾಲ ಕೇಂದ್ರ ಸರ್ಕಾರ ಉಚಿತ ಆಹಾರ ಧಾನ್ಯಗಳನ್ನು ಬಡವರಿಗೆ ಹಂಚಿಕೆ ಮಾಡಲಿದೆ. ಜುಲೈನಿಂದ ನವೆಂಬರ್ವರೆಗೆ ದಿನಸಿ ವಿತರಣೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ 203 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಆಹಾರ ಧಾನ್ಯಗಳನ್ನು ರಾಜ್ಯಗಳಿಗೆ ಪೂರೈಕೆ ಮಾಡಲಾಗುತ್ತಿದೆ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರು ಮಾಹಿತಿ ನೀಡಿದ್ದಾರೆ.
ಇದರಲ್ಲಿ 1 ಲಕ್ಷದ 39 ಸಾವಿರ ಮೆಟ್ರಿಕ್ ಟನ್ ಆಹಾರ ಧಾನ್ಯಗಳನ್ನು ರಾಜ್ಯಗಳಿಗೆ ರವಾನೆ ಮಾಡಲಾಗಿದೆ ಎಂದೂ ಅವರು ತಿಳಿಸಿದ್ದಾರೆ. 396 ರೈಲುಗಳ ಮೂಲಕ 11 ಲಕ್ಷ ಮೆಟ್ರಿಕ್ ಟನ್ ಗಳಷ್ಟು ಆಹಾರ ವಸ್ತುಗಳನ್ನು ರಾಜ್ಯಗಳಿಗೆ ತಲುಪಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ. ಮಾರ್ಚ್ 25 ರಿಂದ ತೊಡಗಿದಂತೆ ಜೂನ್ 30 ರವರೆಗೆ ಭಾರತದ ಆಹಾರ ನಿಗಮವು 4999 ರೈಲುಗಳ ಮುಖಾಂತರ 140 ಮೆಟ್ರಿಕ್ ಟನ್ ಗಳಷ್ಟು ಆಹಾರ ವಸ್ತುಗಳನ್ನು ಸರಬರಾಜು ಮಾಡಿದೆ ಎಂದೂ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಜೊತೆಗೆ 2020-21 ರ ಅವಧಿಯಲ್ಲಿ ರಬಿ ಸೀಸನ್ನಲ್ಲಿ ರೈತರಿಂದ ಅಕ್ಕಿ, ಗೋಧಿ ಸೇರಿದಂತೆ ಇನ್ನಿತರ ಬೆಳೆಗಳ ಖರೀದಿಯನ್ನೂ ಕೇಂದ್ರ ಸರ್ಕಾರ ನಡೆಸುತ್ತಿದೆ. ಈ ತಿಂಗಳಿನ 11ರವರೆಗೆ ಗಮನಿಸಿದಂತೆ ಎಫ್ಸಿಐ 389.54 ಲಕ್ಷ ಮೆಟ್ರಿಕ್ ಟನ್ ಗೋಧಿ ಸಂಗ್ರಹ ಮಾಡಿದೆ. ಜೊತೆಗೆ ಈ ವರೆಗೆ 750.17 ಲಕ್ಷ ಮೆಟ್ರಿಕ್ ಟನ್ ಭತ್ತವನ್ನೂ ಖರೀದಿ ಮಾಡಲಾಗಿರುವುದಾಗಿಯೂ ಪಾಸ್ವಾನ್ ತಿಳಿಸಿದ್ದಾರೆ.
ಒಟ್ಟಿನಲ್ಲಿ ಕೊರೋನಾ ಸಂಕಷ್ಟದ ನಡುವೆಯೂ ದೇಶಕ್ಕೆ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.