ನವದೆಹಲಿ: ಕೇರಳದ ಸುಪ್ರಸಿದ್ಧ ಅನಂತ ಪದ್ಮನಾಭ ದೇಗುಲದ ಆಡಳಿತವನ್ನು ರಾಜಮನೆತನಕ್ಕೆ ವಹಿಸುವಂತೆ ಸುಪ್ರೀಂಕೋರ್ಟ್ ಸೋಮವಾರ ಮಹತ್ವದ ತೀರ್ಪನ್ನು ನೀಡಿದೆ. ಜಗತ್ತಿನ ಅತ್ಯಂತ ಸಿರಿವಂತ ದೇಗುಲ ಎಂಬ ಕೀರ್ತಿಗೆ ಇದು ಪಾತ್ರವಾಗಿದೆ.
ಕೇರಳದ ಪದ್ಮನಾಭಸ್ವಾಮಿ ದೇವಾಲಯದ ನಿರ್ವಹಣೆಯಲ್ಲಿ ತಿರುವನಂತಪುರಂ ರಾಜಮನೆತನದ ಅಧಿಕಾರವನ್ನು ಗುರುತಿಸಿದ ಸುಪ್ರೀಂಕೋರ್ಟ್, ತಿರುವನಂತಪುರಂ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಸಮಿತಿಯು ದೇವಾಲಯದ ವ್ಯವಸ್ಥೆಗಳನ್ನು ಪರಿಶೀಲಿಸಬೇಕು ಎಂದು ತನ್ನ ಆದೇಶದಲ್ಲಿ ತಿಳಿಸಿದೆ.
ಮುಖ್ಯ ಸಮಿತಿ ರಚನೆಯಾಗುವವರೆಗೂ ಈ ವ್ಯವಸ್ಥೆಯು ಜಾರಿಯಲ್ಲಿರುತ್ತದೆ ಮತ್ತು ತಿರುವನಂತಪುರಂ ರಾಜಮನೆತನವು ಸಮಿತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೂ, ಸುಪ್ರೀಂ ಕೋರ್ಟ್ ಐತಿಹಾಸಿಕ ದೇವಾಲಯದ ಭೂಗತ ಕೋಣೆ ತೆರೆಯುವ ಬಗ್ಗೆ ಏನನ್ನೂ ಹೇಳಿಲ್ಲ.
ದೇವಾಲಯದ ನಾಲ್ಕು ಭೂಗತ ನೆಲಮಾಳಿಗೆಗಳಲ್ಲಿ ಚಿನ್ನದ ಆಭರಣಗಳು ಮತ್ತು ಸಾವಿರಾರು ಕೋಟಿ ರೂಪಾಯಿಗಳ ಮೌಲ್ಯದ ಅಮೂಲ್ಯವಾದ ಕಲ್ಲುಗಳಿವೆ ಎಂದು ತನಿಖೆಯ ವೇಳೆ ತಿಳಿದು ಬಂದಿತ್ತು, ನಂತರ ಈ ಪ್ರಾಚೀನ ದೇವಾಲಯವು 2011 ರಲ್ಲಿ ಭಾರೀ ದೊಡ್ಡ ಮಟ್ಟದಲ್ಲಿ ಸುದ್ದಿಯನ್ನು ಮಾಡಿತ್ತು.
ದೇಗುಲ ಮಂಡಳಿಯ ಎಲ್ಲಾ ಸದಸ್ಯರುಗಳು ತ್ರವಂಕೋರ್ ಕೊಚಿನ್ ಹಿಂದೂ ರಿಲಿಜಿಯಸ್ ಇನ್ಸ್ಟಿಟ್ಯೂಷನ್ ಆಕ್ಟ್ 1951 ಅಡಿಯಲ್ಲಿ ಹಿಂದೂ ಧರ್ಮವನ್ನು ಪಾಲನೆ ಮಾಡಬೇಕು ಎಂದು ಸೂಚಿಸಲಾಗಿದೆ.
ದೇಗುಲದ ಭವಿಷ್ಯದ ಆಡಳಿತಕ್ಕೆ ಸಂಬಂಧಿಸಿದಂತೆ ನ್ಯಾಯಪೀಠವು ರಾಜಮನೆತನ ಮತ್ತು ದೇಗುಲ ಪರವಾದ ಕಕ್ಷಿಗಳ ಸಲಹೆಗಳನ್ನು ಸ್ವೀಕಾರ ಮಾಡಿದೆ.
ರಾಜಮನೆತನಕ್ಕೆ ಸಂಬಂಧಿಸಿದ ಟ್ರಸ್ಟ್ನ ಒಡೆತನದಲ್ಲಿ ಇರುವ ದೇಗುಲವನ್ನು ಕೇರಳ ಸರ್ಕಾರಕ್ಕೆ ನೀಡಬೇಕು ಎಂದು 2011ರಲ್ಲಿ ಕೇರಳ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
Supreme Court upholds the rights of Travancore royal family in the administration of Sree Padmanabhaswamy Temple at Thiruvananthapuram in Kerala pic.twitter.com/3Ih9V1czIl
— ANI (@ANI) July 13, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.