ಬೆಂಗಳೂರು: ಕೊರೋನಾ ರೋಗಿಗಳಿಗೆ ಸಹಾಯವಾಗುವಂತೆ ಮತ್ತು ಅವರ ಚಿಕಿತ್ಸೆಗೆ ಸಂಬಂಧಿಸಿದ ಮಾಹಿತಿಗಾಗಿ ತುರ್ತು ಸಹಾಯವಾಣಿ ಆರಂಭಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೊರೋನಾ ಕುರಿತಂತೆ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಿದ ಸುಧಾಕರ್, ನಗರಗಳಲ್ಲಿ ರೋಗಿಗಳಿಗೆ ಹಾಸಿಗೆಗಳ ಸಮರ್ಪಕ ಹಂಚಿಕೆಗೆ ಸಂಬಂಧಿಸಿದಂತೆ ಪೂರಕ ವ್ಯವಸ್ಥೆಗಳನ್ನು ಕಲ್ಪಿಸುವುದು, ಸೋಂಕಿತರ ಸಂಪರ್ಕ ಪತ್ತೆಹಚ್ಚುವ ನಿಟ್ಟಿನಲ್ಲಿ ಬೂತ್ ಮಟ್ಟದ ಟಾಸ್ಕ್ ಫೋರ್ಸ್ಗಳನ್ನು ಬಳಕೆ ಮಾಡಿಕೊಳ್ಳುವ ಬಗ್ಗೆಯೂ ಅವರು ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದಾರೆ.
ರೋಗ ಲಕ್ಷಣಗಳನ್ನು ಹೊಂದಿರುವವರ ಪತ್ತೆಗೆ, ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ತಲು, ಚಿಕಿತ್ಸೆ ಕುರಿತಾಗಿ ಪೂರಕ ಮಾಹಿತಿ ನೀಡಲು, ಆಸ್ಪತ್ರೆಗಳ ಮಾಹಿತಿ, ಆಂಬ್ಯುಲೆನ್ಸ್ ಗಳ ಸಂಯೋಜನೆಗಾಗಿ ಹಾಗೂ ಇನ್ನಿತರ ಸಂದರ್ಭದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ತುರ್ತು ಸಹಾಯವಾಣಿ ಆರಂಭಿಸಬೇಕು. ಜೊತೆಗೆ ಜನರಿಗೆ ರೋಗದಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿಯೂ ಸಹಾಯಕಾರಿ ಕ್ರಮಗಳನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೊರೋನಾ ಕುರಿತಂತೆ ಜನರಲ್ಲಿ ಮನೆ ಮಾಡಿರುವ ಗೊಂದಲಗಳನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿಯೂ ಪೂರಕ ಕ್ರಮ ಕೈಗೊಳ್ಳಬೇಕು. ರ್ಯಾಪಿಡ್ ಆಂಟಿಜೆನ್ ಟೆಸ್ಟ್ ಗಳ ಅಗತ್ಯತೆ ಇರುವ ಕ್ಲಸ್ಟರ್ಗಳನ್ನು ಗುರುತಿಸುವುದಕ್ಕೂ ಶೀಘ್ರದಲ್ಲೇ ಕ್ರಮ ಕೈಗೊಳ್ಳಬೇಕು ಎಂದೂ ಅವರು ಆದೇಶ ನೀಡಿದ್ದಾರೆ. ಜೊತೆಗೆ ಪರೀಕ್ಷಾ ವರದಿಗಳು ವಿಳಂಬವಾಗದಂತೆಯೂ ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.