News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾ ಮಾದರಿ ವರದಿ ಬರುವವರೆಗೆ ಹೋಂ ಕ್ವಾರಂಟೈನ್ ಕಡ್ಡಾಯ: ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ನಿಯಂತ್ರಣಕ್ಕೆ ತರುವುದೇ ಸವಾಲಾಗಿ ಪರಿಣಮಿಸಿದೆ. ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಇದೀಗ ಮತ್ತೊಂದು ಕ್ರಮಕ್ಕೆ ಮುಂದಾಗಿದ್ದು, ಕೊರೋನಾ ಪರೀಕ್ಷೆ ನಡೆಸಿ ವರದಿಗಾಗಿ ಕಾಯುತ್ತಿರುವ ಸಾರ್ವಜನಿಕರು ವರದಿ ಬರುವಲ್ಲಿಯವರೆಗೆ ಮನೆಯಲ್ಲಿಯೇ ಕಡ್ಡಾಯವಾಗಿ ಹೋಂ ಕ್ವಾರಂಟೈನ್ ಅಥವಾ ಐಸೋಲೇಷನ್‌ಗೆ ಒಳಗಾಗಬೇಕು ಎಂದು ಆದೇಶಿಸಿದೆ.

ಕೋವಿಡ್-19 ಪರೀಕ್ಷೆಗಾಗಿ ಮಾದರಿ ನೀಡಿರುವ ವ್ಯಕ್ತಿಗಳಿಗೆ ಸೋಂಕು ಇರುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಈ ಹಿನ್ನೆಲೆಯಲ್ಲಿ ಮಾದರಿಗಳನ್ನು ಲ್ಯಾಬ್ ಗೆ ನೀಡಿದ ಬಳಿಕ ವರದಿ ಬರುವಲ್ಲಿಯವರೆಗೆ ಕಡ್ಡಾಯವಾಗಿ ಹೋಂ ಐಸೋಲೇಷನ್ ಪ್ರಕ್ರಿಯೆ ಪಾಲಿಸಬೇಕು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ. ಪರೀಕ್ಷೆಗೆ ಮಾದರಿಗಳನ್ನು ನೀಡಿದ ಬಳಿಕ ಸಾರ್ವಜನಿಕವಾಗಿ ಅಡ್ಡಾಡಿದರೆ, ಒಂದು ವೇಳೆ ಆ ವ್ಯಕ್ತಿಗೆ ಸೋಂಕಿದ್ದರೆ ಅದು ಇತರರಿಗೂ ಹಬ್ಬುವ ಸಾಧ್ಯತೆಗಳನ್ನು ತಳ್ಳಿಹಾಕುವಂತಿಲ್ಲ. ಆದ್ದರಿಂದ ವರದಿ ಬರುವಲ್ಲಿಯವರೆಗೆ ಸ್ವಯಂ ನಿಯಂತ್ರಣ ಕ್ರಮ ಅನುಸರಿಸಬೇಕು ಎಂದು ಸರ್ಕಾರ ತಿಳಿಸಿದೆ.

ಒಂದು ವೇಳೆ ಈ ಮಾನದಂಡವನ್ನು ಮೀರಿ ವರ್ತಿಸಿದರೆ, ಅಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನೂ ಸರ್ಕಾರ ಕೊಟ್ಟಿದೆ. ಶಂಕಿತ/ಸೋಂಕಿತ ವ್ಯಕ್ತಿಗಳ ಬೇಜವಾಬ್ದಾರಿಯುತ ವರ್ತನೆ, ಸಾರ್ವಜನಿಕವಾಗಿ ಓಡಾಟ ನಡೆಸುವುದು ಇತ್ಯಾದಿಗಳಿಂದ ಸೋಂಕು ಹರಡುವ, ಹರಡಿಸಿಕೊಳ್ಳುವ ಸಾಧ್ಯತೆಗಳಿದ್ದು, ಎಚ್ಚರಿಕೆಯಿಂದ ಇರುವಂತೆಯೂ ಸರ್ಕಾರ ಸೂಚಿಸಿದೆ. ಅಲ್ಲದೆ ಯಾರಿಂದಲಾದರೂ ಇಂತಹ ನಡೆ ಕಂಡು ಬಂದರೆ ಅದು ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿಯಲ್ಲಿ ಶಿಕ್ಷಾರ್ಹವಾಗಿದೆ ಎಂದೂ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ಈ ವರೆಗೆ 38,843ಕ್ಕೂ ಅಧಿಕ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಅತಿ ಹೆಚ್ಚು ಕೊರೋನಾ ಸೋಂಕಿತರಿರುವ ಭಾರತದ 5ನೇ ರಾಜ್ಯ ಎಂಬುದಾಗಿ ಗುರುತಿಸಿಕೊಳ್ಳುತ್ತಿದೆ. ಇದರಲ್ಲಿ 15,409 ರಷ್ಟು ರೋಗಿಗಳು ಚೇತರಿಸಿಕೊಂಡಿದ್ದು, 684ರಷ್ಟು ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 18000ಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದ್ದು, 4000 ಕ್ಕೂ ಅಧಿಕ ಜನರು ಸುಧಾರಿಸಿಕೊಂಡಿದ್ದಾರೆ. 275 ಮಂದಿ ಸಾವನ್ನಪ್ಪಿದ್ದಾರೆ.

ಇನ್ನು ಕೇಂದ್ರ ಸಚಿವಾಲಯ ಭಾರತದ ಕೊರೋನಾ ಅಂಕಿಅಂಶಗಳ ವರದಿ ನೀಡಿದ್ದು, 8,78,254 ಮಂದಿಗೆ ಸೋಂಕು ತಗುಲಿದೆ. 5,53,470 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 23,174 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದೆ. ಯುಎಸ್ ಮತ್ತು ಬ್ರೆಜಿಲ್ ನ ನಂತರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಭಾರತದಲ್ಲೇ ಹೆಚ್ಚಾಗಿದ್ದು, ವಿಶ್ವದಲ್ಲೇ 3 ನೇ ಸ್ಥಾನದಲ್ಲಿದೆ ಎಂದೂ ಕೇಂದ್ರ ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top