ನವದೆಹಲಿ: ಈಗಾಗಲೇ ಭಾರತ ವಿರೋಧಿ ಹೇಳಿಕೆಗಳನ್ನು ನೀಡಿ ಭಾರತದ ಕೆಂಗಣ್ಣಿಗೆ ಗುರಿಯಾಗಿರುವ ನೇಪಾಳ ಪ್ರಧಾನಿ ಕೆ.ಪಿ ಓಲಿ ಅವರು ಇದೀಗ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಹಿಂದೂಗಳ ಆರಾಧ್ಯ ದೈವ ಭಗವಾನ್ ಶ್ರೀರಾಮ ಭಾರತದವನಲ್ಲ, ನೇಪಾಳದವನು ಎಂದಿದ್ದಾರೆ.
“ಶ್ರೀರಾಮ ಭಾರತದವನಲ್ಲ, ಆತ ನೇಪಾಳದವನು. ಆತನ ಸಾಮ್ರಾಜ್ಯ ಇದ್ದಿದ್ದು ಅಯೋಧ್ಯೆಯಲ್ಲಿ ಅಲ್ಲ, ಬಿರ್ಗುಂಜ್ ಪಶ್ಚಿಮದಲ್ಲಿದೆ” ಎಂದು ಓಲಿ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭಾರತದ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಬಂದಿರುವ ಓಲಿ ಅವರಿಗೆ ಅವರ ಪಕ್ಷದವರಿಂದಲೇ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಅವರ ರಾಜೀನಾಮೆಗೆ ಸ್ವಪಕ್ಷದವರೇ ಒತ್ತಡ ಹೇರುತ್ತಾ ಬಂದಿದ್ದಾರೆ.
ಓಲಿ ಅವರು ಚೀನಾದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಎಂಬ ಆರೋಪಗಳೂ ಕೇಳಿ ಬಂದಿವೆ.
ಕಲಾಪನಿಯಂತಹ ಭಾರತೀಯ ಭೂಪ್ರದೇಶವನ್ನು ನೇಪಾಳಕ್ಕೆ ಸೇರಿದ್ದು ಎಂದು ಪ್ರತಿಪಾದಿಸುವ ಹೊಸ ನಕ್ಷೆಗಳನ್ನು ಬಿಡುಗಡೆ ಮಾಡಿದ ನಂತರ ಓಲಿ ಇತ್ತೀಚೆಗೆ ಭಾರತದೊಂದಿಗೆ ಸಂಬಂಧವನ್ನು ಹಾಳು ಮಾಡಿಕೊಂಡಿದ್ದಾರೆ.
ಇದೀಗ ಶ್ರೀರಾಮ ಭಾರತಕ್ಕೆ ಸೇರಿದವನಲ್ಲ ಎಂಬುದಾಗಿ ಹೇಳಿಕೆ ನೀಡುವ ಮೂಲಕ ಮತ್ತೆ ಅವರು ಭಾರತವನ್ನು ಕೆಣಕುವ ಪ್ರಯತ್ನ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.