ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು 11.30ಕ್ಕೆ ಫಲಿತಾಂಶವನ್ನು ಪತ್ರಿಕಾಗೋಷ್ಠಿಯ ಮೂಲಕ ಪ್ರಕಟಗೊಳಿಸಿದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲು ಗೈ ಸಾಧಿಸಿದ್ದಾರೆ. ಗ್ರಾಮಾಂತರ ಶಾಲೆಗಳು ಅತ್ಯುತ್ತಮ ಪ್ರದರ್ಶನ ನೀಡಿವೆ.
54.77% ಬಾಲಕಿಯರ ಉತ್ತೀರ್ಣ ಪ್ರಮಾಣವಾದರೆ, 52.94% ಬಾಲಕರ ಉತ್ತೀರ್ಣ ಪ್ರಮಾಣವಾಗಿದೆ. ಒಟ್ಟು ಉತ್ತೀರ್ಣ ಪ್ರಮಾಣ 62.70% ಆಗಿದೆ. ವಿಜ್ಞಾನ ವಿಭಾಗದಲ್ಲಿ ಉತ್ತೀರ್ಣ ಪ್ರಮಾಣ 65.27%, ವಾಣಿಜ್ಯ ವೀಭಾಗದಲ್ಲಿ ಉತ್ತೀರ್ಣ ಪ್ರಮಾಣ 76.22% ಆಗಿದೆ. ಕಲಾ ವಿಭಾಗ 41.27% ಆಗಿದೆ.
6,75,277 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 1016 ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 70 ಮೌಲ್ಯಮಾಪನ ಕೇಂದ್ರಗಳನ್ನು ತೆರೆಯಲಾಗಿತ್ತು. 11970 ಮೌಲ್ಯಮಾಪಕರು ಮೌಲ್ಯಮಾಪನ ಮಾಡಿದ್ದಾರೆ.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಫಲಿತಾಂಶದಲ್ಲಿ 90.71% ದಾಖಲಿಸುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡಿವೆ. ಕೊಡುಗು 2ನೇ ಸ್ಥಾನ, ಉತ್ತರಕನ್ನಡ 3, ಚಿಕ್ಕಮಗಳೂರು 4ನೇ, ಬೆಂಗಳೂರು ದಕ್ಷಿಣ 5ನೇ ಸ್ಥಾನ ಪಡೆದುಕೊಂಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.