ನವದೆಹಲಿ: ಇತಿಹಾಸದಲ್ಲೇ ಮೊದಲ ಬಾರಿಗೆ ಈ ವರ್ಷ ಭಾರತ ಸಂಪೂರ್ಣ ವಿಭಿನ್ನವಾದ ಸ್ವಾತಂತ್ರ್ಯೋತ್ಸವಕ್ಕೆ ಸಾಕ್ಷಿಯಾಗಲಿದೆ. ಕೆಂಪು ಕೋಟೆಯಲ್ಲಿ ಆಗಸ್ಟ್ 15ರಂದು ಈ ಬಾರಿ ಮಕ್ಕಳ ಕಲರವ ಇರುವುದಿಲ್ಲ, ಜನಸಾಗರ ಇರುವುದಿಲ್ಲ. ಕೇವಲ 20 ಮಂದಿ ವಿವಿಐಪಿಗಳು ಮತ್ತು ನೂರಾರು ಸಂಖ್ಯೆಯ ಇತರರು ಮಾತ್ರ ಭಾಗಿಯಾಗಲಿದ್ದಾರೆ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಭಾಷಣಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ವರದಿಗಳು ಹೇಳಿವೆ.
ವರದಿಗಳ ಪ್ರಕಾರ, ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಮತ್ತು ಎಎಸ್ಐ ಮಹಾನಿರ್ದೇಶಕರು ಈಗಾಗಲೇ ಕಳೆದ ವಾರ ಕೆಂಪು ಕೋಟೆಗೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಕುಮಾರ್ ಅವರು ವ್ಯವಸ್ಥೆಗಳ ಬಗ್ಗೆ ಪರಿಶೀಲನೆಯನ್ನು ನಡೆಸಿ, ಸಾಮಾಜಿಕ ಅಂತರವನ್ನು ಗಮನದಲ್ಲಿಟ್ಟುಕೊಂಡು ವ್ಯವಸ್ಥೆಗಳನ್ನು ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮೂಲಗಳ ಪ್ರಕಾರ, ಈ ಬಾರಿ ಸ್ವಾತಂತ್ರ್ಯೋತ್ಸವ ಸಂಪೂರ್ಣ ಬದಲಾವಣೆಯಾಗಲಿದೆ. ಮಕ್ಕಳ ಭಾಗವಹಿಸುವಿಕೆ ಇಲ್ಲದಿದ್ದರೂ, ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ನ ಕೆಡೆಟ್ಗಳು ಕೆಂಪು ಕೋಟೆಯಲ್ಲಿ ನಡೆಯುವ ಆಚರಣೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಗಮನಾರ್ಹವಾಗಿ, ಕೊರೋನಾ ರೋಗದಿಂದ ಚೇತರಿಸಿಕೊಂಡ ಹಲವು ಮಂದಿ ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಅವರಲ್ಲಿ ಹೆಚ್ಚಿನವರು ಪೊಲೀಸರಾಗಿರುವ ಸಾಧ್ಯತೆ ಇದೆ.
ಕಳೆದ ವರ್ಷದವರೆಗೂ, ಪ್ರಧಾನ ಮಂತ್ರಿಯ ಭಾಷಣಕ್ಕೆ ಸಾಕ್ಷಿಯಾಗಲು ಕನಿಷ್ಠ 10,000 ಜನರು ಈ ಸಮಾರಂಭದಲ್ಲಿ ಭಾಗವಹಿಸುತ್ತಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.