ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುವುದಕ್ಕೆ ದಿವ್ಯಾಂಗರು ಅರ್ಹರು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ದೈಹಿಕ ವೈಕಲ್ಯ ಹೊಂದಿದವರೂ ಸಹ ಹಿಂದುಳಿದ ವರ್ಗಗಳ ಅಡಿಯಲ್ಲಿಯೇ ಸೇರುತ್ತಾರೆ. ಆ ಕಾರಣದಿಂದಾಗಿ ಪ. ಜಾತಿ/ಪಂಗಡ ಗಳಿಗೆ ನೀಡುವ ಎಲ್ಲಾ ಸವಲತ್ತುಗಳನ್ನು ವಿಕಲಾಂಗ ಚೇತನರಿಗೂ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದಿವ್ಯಾಂಗರಾಗಿರುವ ಪಂಜಾಬ್ ಮೂಲದ ಆರ್ಯನ್ ರಾಜ್ ಅವರು ಚಂಢೀಗಡ ದ ಸರ್ಕಾರಿ ಕಲಾ ಕಾಲೇಜಿನಲ್ಲಿ ದಿವ್ಯಾಂಗ ಮತ್ತು ವಿಕಲಚೇತನ ಕೋಟಾ ದ ಅಡಿಯಲ್ಲಿ ಡಿಪ್ಲೊಮಾ ಇನ್ ಫೈನ್ ಆರ್ಟ್ಸ್ ಕೋರ್ಸ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅವರಿಗೆ ರಿಯಾಯಿತಿ ಯಲ್ಲಿ ವ್ಯಾಸಂಗ ಮಾಡಲು ಅವಕಾಶ ನೀಡಲು ಕಾಲೇಜು ನಿರಾಕರಿಸಿತ್ತು. 40% ಅಂಕವಿದ್ದರಷ್ಟೇ ಅವಕಾಶ ನೀಡುವುದಾಗಿ ಕಾಲೇಜು ತಿಳಿಸಿತ್ತು. ಕಾಲೇಜಿನ ಈ ನಡೆಯನ್ನು ಪ್ರಶ್ನಿಸಿ ಆರ್ಯನ್ ಅವರು ಪಂಜಾಬ್ ಮತ್ತು ಹರ್ಯಾಣ ಉಚ್ಚ ನ್ಯಾಯಾಲಯದ ಮೆಟ್ಟಿಲೇರಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಕಲಾಂಗರು ಮತ್ತು ದಿವ್ಯಾಂಗರೂ ಪರಿಶಿಷ್ಟ ಜಾತಿ/ಪಂಗಡಕ್ಕೆ ನೀಡುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುವುದಕ್ಕೂ ಅರ್ಹರೇ. ಆದರೆ ವಿಕಲಾಂಗರು ಮತ್ತು ಬುದ್ದಿಮಾಂದ್ಯರಿಗೆ ಬೇರೆ ಬೇರೆ ಕೋಟಾದಡಿಯಲ್ಲಿ ಸೌಲಭ್ಯ ನೀಡಬೇಕು ಎಂಬ ವಾದವನ್ನು ತಿರಸ್ಕರಿಸಿತ್ತು. ಆದರೆ ಈ ವಿಚಾರವನ್ನು ಆರ್ಯನ್ ಅವರು ಸುಪ್ರೀಂಕೋರ್ಟ್ ಮುಂದಿಟ್ಟಿದ್ದರು. ಸುಪ್ರೀಂಕೋರ್ಟ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.
ಸಾರ್ವಜನಿಕ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಹಿಂದುಳಿದ ಜಾತಿ, ವರ್ಗ ಕ್ಕೆ ಸಿಗುವ ಎಲ್ಲಾ ರೀತಿಯ ರಿಯಾಯಿತಿ ಗಳನ್ನು ಪಡೆದುಕೊಳ್ಳುವುದಕ್ಕೆ ವಿಕಲಾಂಗ ಚೇತನರಿಗೂ ಅವಕಾಶವಿದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.