ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪ್ರದೇಶದಲ್ಲಿ ಬಿಜೆಪಿ ಮುಖಂಡ ಮತ್ತು ವಾಟರ್ಗಮ್ ಮುನ್ಸಿಪಲ್ ಕಮಿಟಿ (ಎಂಸಿ) ಉಪಾಧ್ಯಕ್ಷ ಮೆಹರಾಜ್ ದಿನ್ ಮಲ್ಲಾ ಅವರನ್ನು ಬುಧವಾರ ಬೆಳಿಗ್ಗೆ ಅಪಹರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಮೆಹರಾಜ್ ಅವರನ್ನು ಅಪರಿಚಿತ ವ್ಯಕ್ತಿಯೊಬ್ಬ ಅಪಹರಿಸಿದ್ದಾನೆ ಎಂದು ವರದಿಗಳು ಹೇಳುತ್ತಿವೆ. ಪೊಲೀಸರು ಈ ಪ್ರದೇಶದಲ್ಲಿ ಅಪಹರಣಕಾರರಿಗಾಗಿ ತೀವ್ರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.
ಭಯೋತ್ಪಾದಕರೇ ಈ ಕೃತ್ಯವನ್ನು ಎಸಗಿರಬಹುದು ಎಂಬ ಬಗ್ಗೆ ಬಲವಾದ ಶಂಕೆಗಳು ಮೂಡಿವೆ.
ಪೊಲೀಸರು ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಕಾಶ್ಮೀರದ ಬಿಜೆಪಿ ವಕ್ತಾರರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗೆ, ಬಂಡಿಪೋರಾದಲ್ಲಿ ಬಿಜೆಪಿ ನಾಯಕ ಶೇಖ್ ವಸೀಮ್ ಬರಿ ಅವರನ್ನು, ಅವರ ತಂದೆ ಮತ್ತು ಸಹೋದರನನ್ನು ಜುಲೈ 8 ರಂದು ಭಯೋತ್ಪಾದಕರು ಅವರ ಅಂಗಡಿಯಲ್ಲೇ ಕೊಂದು ಹಾಕಿದ್ದರು. ಬರಿ ಶ್ರೀನಗರದಿಂದ ಉತ್ತರಕ್ಕೆ 60 ಕಿ.ಮೀ ದೂರದಲ್ಲಿರುವ ಬಂಡಿಪೋರಾ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಮಾಜಿ ಅಧ್ಯಕ್ಷರಾಗಿದ್ದರು.
ಈ ಘಟನೆ ಮಾಸುವೇ ಮುನ್ನವೇ ಮತ್ತೋರ್ವ ಬಿಜೆಪಿ ಮುಖಂಡನ ಅಪಹರಣವಾಗಿದ್ದು ದೊಡ್ಡ ಆತಂಕವನ್ನು ಸೃಷ್ಟಿಸಿದೆ. ಜಿಹಾದಿಗಳು ಇದೀಗ ರಾಜಕೀಯ ನಾಯಕರನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಇದು ನಿದರ್ಶನವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.