ಬೆಂಗಳೂರು: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಜೀವವನ್ನೇ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸಿದ ಬಿಎಂಟಿಸಿ ನೌಕರರಿಗೆ ವಿಶೇಷ ಭತ್ಯೆ ನೀಡಲು ಸಾರಿಗೆ ಸಂಸ್ಥೆ ನಿರ್ಧರಿಸಿದೆ.
ಮಾರ್ಚ್ 26 ರಿಂದ ತೊಡಗಿ, ಎಪ್ರಿಲ್ 20 ರ ವರೆಗೆ ಬಿಎಂಟಿಸಿ ಯಲ್ಲಿ ಕರ್ತವ್ಯ ನಿರ್ವಹಿಸಿದ 3397 ಮಂದಿ ಸಿಬ್ಬಂದಿಗಳಿಗೆ ದಿನಕ್ಕೆ 250 ರೂ. ಗಳಂತೆ ವಿಶೇಷ ಭತ್ಯೆ ನೀಡಲು ಮುಂದಾಗಿದೆ. ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ವಿಶೇಷ ಭತ್ಯೆ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ನೌಕರರನ್ನು ಪ್ರೋತ್ಸಾಹಿಸಲು, ಅವರಲ್ಲಿ ಕೆಲಸ ಮಾಡುವ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಈ ಭತ್ಯೆಯನ್ನು ನೀಡಲಾಗುತ್ತಿದೆ ಎಂದೂ ಸಂಸ್ಥೆ ಮಾಹಿತಿ ನೀಡಿದೆ.
ಕೊರೋನಾ ಬಿಕ್ಕಟ್ಟಿನ ಅವಧಿಯಲ್ಲಿ ಸಾರ್ವಜನಿಕರಿಗೆ ತುರ್ತು ಸೇವೆಗಳನ್ನು ಒದಗಿಸುವ ಸಂಬಂಧ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ನಿರ್ದೇಶಿಸಿದ್ದ ಹಿನ್ನೆಲೆಯಲ್ಲಿ ಸಮಾಜದ ಹಲವಾರು ವಲಯಗಳ ಸಿಬ್ಬಂದಿಗಳು ಜೀವವನ್ನೂ ಲೆಕ್ಕಿಸದೆ ಕಾರ್ಯ ನಿರ್ವಹಿಸಿದ್ದರು. ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಇಲಾಖೆ, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತರ ಜೊತೆಗೆ ಬಿಎಂಟಿಸಿ ಸಿಬ್ಬಂದಿಗಳೂ ಜನರಿಗೆ ಅಗತ್ಯ ಸಾರಿಗೆ ವ್ಯವಸ್ಥೆಯ ಅನುಕೂಲವನ್ನು ಒದಗಿಸಿಕೊಟ್ಟಿದ್ದವು. ಈ ಸಿಬ್ಬಂದಿಗಳು ಸ್ವಯಂ ಪ್ರೇರಿತರಾಗಿ ಕರ್ತವ್ಯ ನಿಭಾಯಿಸಿದ್ದರು ಎಂದೂ ಅಧಿಕೃತ ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.