ಲಕ್ನೋ: ರಾಜ್ಯದಲ್ಲಿನ ರಸ್ತೆಗಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ 2,250 ಕೋಟಿ ರೂ. ಗಳ ಯೋಜನೆಗಳಿಗೆ ಚಾಲನೆ ನೀಡಿದೆ.
ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್ ಈ ಯೋಜನೆಗಳಿಗೆ ಹಣಕಾಸು ನೆರವು ನೀಡಿರುವುದಾಗಿಯೂ ಯೋಗಿ ಮಾಹಿತಿ ನೀಡಿದ್ದಾರೆ.
ಎಂಟು ರಸ್ತೆಗಳ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿರುವ ಯೋಗಿ, “ಜಗತ್ತಿನ ಎಲ್ಲಾ ರಾಷ್ಟ್ರಗಳು ಕೋವಿಡ್ 19 ಎಂಬ ಮಹಾಮಾರಿಯಿಂದ ಕಂಗೆಟ್ಟಿದೆ. ಆದರೆ ಉತ್ತರ ಪ್ರದೇಶದಲ್ಲಿ ಈ ಸಾಂಕ್ರಾಮಿಕ ಸಂದರ್ಭದಲ್ಲಿ ಅವಧಿಯನ್ನು ಅರ್ಥಪೂರ್ಣವಾಗಿ ಬಳಸುವ ಉದ್ದೇಶದಿಂದ ಅಭಿವೃದ್ಧಿ ಚಟುವಟಿಕೆಗಳಿಗೆ ವೇಗವನ್ನು ನೀಡಲಾಗುತ್ತಿದೆ” ಎಂದು ಹೇಳಿದ್ದಾರೆ.
ಏಳು ರಾಜ್ಯಗಳ ಜೊತೆಗೆ ಮತ್ತು ನೆರೆಯ ದೇಶ ನೇಪಾಳದ ಜೊತೆಗೂ ಉತ್ತರ ಪ್ರದೇಶ ಗಡಿ ಹಂಚಿಕೆ ಮಾಡಿಕೊಂಡಿದೆ. ಇಂತಹ 54 ರಸ್ತೆಗಳನ್ನು ಪಿಡಬ್ಲ್ಯುಡಿ ಇಲಾಖೆ ಚತುಷ್ಪಥ ರಸ್ತೆಗಳನ್ನಾಗಿ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿಯೂ ಕಾರ್ಯಾರಂಭ ಮಾಡಿದೆ ಎಂಬುದಾಗಿಯೂ ಯೋಗಿ ತಿಳಿಸಿದ್ದಾರೆ. ಜೊತೆಗೆ ರಾಜ್ಯದ 1.20 ಕಿಮೀ ರಸ್ತೆಗಳಲ್ಲಿದ್ದ ಗುಂಡಿಗಳನ್ನು ಮುಚ್ಚಿ, ರಸ್ತೆಗಳನ್ನು ಸುಸ್ಥಿತಿಗೆ ತಂದಿಡುವಲ್ಲಿಯೂ ಪಿಡಬ್ಲ್ಯುಡಿ ಕೆಲಸ ಮಾಡಿರುವುದಾಗಿ ಯೋಗಿ ಹೇಳಿದ್ದು, ಅತ್ಯುತ್ತಮ ರಸ್ತೆಗಳನ್ನು ಹೊಂದುವ ಮೂಲಕ ಅಭಿವೃದ್ಧಿ ಹೊಂದುವಲ್ಲಿಯೂ ರಾಜ್ಯ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.
ಈ ಅಭಿವೃದ್ಧಿ ಯೋಜನೆಗಳಿಗೆ 70% ಹಣವನ್ನು ವಿಶ್ವ ಬ್ಯಾಂಕ್ ಮತ್ತು ಎಡಿಬಿ ನೀಡಿದರೆ, ಉಳಿದ 30% ವನ್ನು ರಾಜ್ಯದಿಂದ ಭರಿಸಲಾಗುತ್ತಿದೆ ಎಂದೂ ಆದಿತ್ಯನಾಥ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.