ಲಡಾಖ್: ಜಗತ್ತಿನ ಯಾವ ಶಕ್ತಿಗೂ ಭಾರತದ ಒಂದು ಇಂಚು ಭೂಮಿಯನ್ನು ಕೂಡ ಕಸಿದುಕೊಳ್ಳುವ ಸಾಮರ್ಥ್ಯ ಇಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹೇಳಿದ್ದಾರೆ.
ಚೀನಾದೊಂದಿಗಿನ ಘರ್ಷಣೆಯ ಹಿನ್ನೆಲೆಯಲ್ಲಿ ಇಂದು ಲಡಾಕ್ಗೆ ಭೇಟಿ ನೀಡಿದ ಅವರು, ಸೇನಾ ಕಮಾಂಡರ್ಗಳ ಜೊತೆ ಮಾತುಕತೆಯನ್ನು ನಡೆಸಿದರು. ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್, ಸೇನೆ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, “ಗಡಿ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆಗಳು ನಡೆಯುತ್ತಿದೆ, ಆದರೆ ಅದು ಎಷ್ಟರಮಟ್ಟಿಗೆ ಸಫಲವಾಗುತ್ತದೆ ಎಂಬ ಬಗ್ಗೆ ಗ್ಯಾರಂಟಿ ಇಲ್ಲ. ಆದರೆ ನಾನು ನಿಮಗೆ ಭರವಸೆ ನೀಡುತ್ತೇನೆ, ನಮ್ಮ ಒಂದು ಇಂಚು ಭೂಮಿಯನ್ನು ಕೂಡ ಕಸಿದುಕೊಳ್ಳುವ ಸಾಮರ್ಥ್ಯ ವಿಶ್ವದ ಯಾವುದೇ ಶಕ್ತಿಗೂ ಇಲ್ಲ. ಸಮಸ್ಯೆಗೆ ಮಾತುಕತೆಯ ಮೂಲಕ ಪರಿಹಾರ ಸಿಕ್ಕರೆ ಅದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲ” ಎಂದಿದ್ದಾರೆ.
Raksha Mantri Shri @rajnathsingh witnessing para dropping and scoping weapons at Stankna near Leh. pic.twitter.com/2vwvjotI7q
— रक्षा मंत्री कार्यालय/ RMO India (@DefenceMinIndia) July 17, 2020
“ಇತ್ತೀಚಿಗೆ ಭಾರತ ಮತ್ತು ಚೀನಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ ನಮ್ಮ ಹಲವು ಯೋಧರು ಗಡಿಗಳನ್ನು ಸಂರಕ್ಷಣೆ ಮಾಡುತ್ತಾ ಪ್ರಾಣತ್ಯಾಗ ಮಾಡಿದ್ದಾರೆ. ನಿಮ್ಮನ್ನೆಲ್ಲ ಬೇಟಿಯಾಗಲು ನನಗೆ ಸಂತೋಷವಾಗುತ್ತದೆ ಆದರೆ ನಮ್ಮನ್ನು ಅಗಲಿದ ಯೋಧರಿಗಾಗಿ ನೋವಾಗುತ್ತಿದೆ. ನಾನು ಅವರಿಗೆ ಗೌರವ ಸಮರ್ಪಿಸುತ್ತೇನೆ” ಎಂದಿದ್ದಾರೆ.
ಇಂದು ಬೆಳಗ್ಗೆ ರಾಜನಾಥ್ ಸಿಂಗ್ ಅವರು ಬಿಪಿನ್ ರಾವತ್ ಹಾಗೂ ಸೇನಾ ಮುಖ್ಯಸ್ಥರೊಂದಿಗೆ ಲಡಾಖ್ ಅನ್ನು ತಲುಪಿದರು. ರಾಜನಾಥ್ ಸಿಂಗ್ ಅವರು ಸ್ಟಕ್ನಾ ಮತ್ತು ಲುಕುಂಗ್ ಮುಂಚೂಣಿ ನೆಲೆಗಳಿಗೂ ಭೇಟಿ ನೀಡಿದರು.
ಪ್ರಧಾನಿ ನರೇಂದ್ರ ಮೋದಿಯವರು ಯೋಧರ ನೈತಿಕ ಸ್ಥೈರ್ಯವನ್ನು ಇಮ್ಮಡಿಗೊಳಿಸುವ ಸಲುವಾಗಿ ಲಡಾಖ್ಗೆ ಭೇಟಿ ನೀಡಿದ ಒಂದು ವಾರಗಳ ಬಳಿಕ ರಾಜನಾಥ್ ಸಿಂಗ್ ಅವರು ಅಲ್ಲಿಗೆ ಭೇಟಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.