ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ರಾಜ್ಯದಲ್ಲಿ ಈವರೆಗೆ ಸುಮಾರು 9.25 ಲಕ್ಷ ಜನರಿಗೆ ಕೊರೋನಾ ಪರೀಕ್ಷೆಗಳನ್ನು ನಡೆಸಲಾಗಿದ್ದು, ಅತ್ಯಂತ ನಿಖರ ಫಲಿತಾಂಶವನ್ನು ಪಡೆಯಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ರಾಜ್ಯದಲ್ಲಿ ಮಾದರಿಗಳನ್ನು ಪರೀಕ್ಷೆ ಮಾಡಿ ನಿಖರವಾದ ಫಲಿತಾಂಶವನ್ನು ನೀಡುವ ಆರ್ಟಿ -ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಪ್ರತಿನಿತ್ಯ ಅನೇಕ ಜನರು ತಮಗೆ ಸೋಂಕು ತಗುಲಿದೆಯೋ, ಇಲ್ಲವೋ ಎಂಬುದನ್ನು ಖಚಿತ ಪಡಿಸಿಕೊಳ್ಳುತ್ತಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿತ್ಯ 10 ಲಕ್ಷ ಜನಸಂಖ್ಯೆಗೆ ಕನಿಷ್ಠ 140 ಮಂದಿಗಾದರೂ ಪರೀಕ್ಷೆ ನಡೆಸುವಂತೆ ಸೂಚಿಸಿದೆ ಎಂದೂ ಅವರು ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ 297 ಮಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ ಎಂದೂ ಹೇಳಿದ್ದಾರೆ. ರಾಜ್ಯದಲ್ಲಿ ಪರೀಕ್ಷೆ ನಡೆಸುತ್ತಿರುವ ಪ್ರಮಾಣವೂ ಹೆಚ್ಚಾಗಿದ್ದು, ನಿಖರವಾದ ಫಲಿತಾಂಶ ನೀಡಲಾಗುತ್ತಿದೆ ಎಂದೂ ತಿಳಿಸಿದ್ದಾರೆ.
ಇನ್ನು ದೇಶದಲ್ಲೇ ಅತೀ ಹೆಚ್ಚಿನ ಕೊರೋನಾ ಟೆಸ್ಟ್ಗಳನ್ನು ನಡೆಸುವ ರಾಜ್ಯಗಳ ಪೈಕಿ ಕರ್ನಾಟಕ ಹತ್ತನೇ ಸ್ಥಾನದ ಒಳಗೆ ಸ್ಥಾನ ಪಡೆದಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.
ಇನ್ನು ಕೊರೋನಾ ಕರಾಳತೆ ರಾಜ್ಯದಲ್ಲಿ ಹೆಚ್ಚಾಗದಂತೆ ತಡೆಯಲು ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಂಡಿದ್ದು, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡುವಲ್ಲಿಯೂ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.