ನವದೆಹಲಿ: ರಾಜ್ಯಸಭೆಯ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಜುಲೈ 22 ರಂದು ಪ್ರಮಾಣವಚನ ಅಥವಾ ದೃಢೀಕರಣವನ್ನು ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ.
ರಾಜ್ಯಸಭೆ ಮತ್ತು ಲೋಕಸಭಾ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಗಳ ಸಭೆಗಳನ್ನು ಪುನರಾರಂಭಿಸಲು ಮತ್ತು ಈ ಸಭೆಯಲ್ಲಿ ಭಾಗವಹಿಸಲು ಹೊಸ ಸದಸ್ಯರು ವ್ಯಕ್ತಪಡಿಸಿದ ಆಶಯವನ್ನು ಗಮನದಲ್ಲಿಟ್ಟುಕೊಂಡು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸಲು ರಾಜ್ಯಸಭಾ ಉಪಾಧ್ಯಕ್ಷ ಎಂ.ವೆಂಕಯ್ಯ ನಾಯ್ಡು ನಿರ್ಧರಿಸಿದ್ದಾರೆ ಎಂದು ನಾಯ್ಡು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಂಸತ್ತಿನ ಸದಸ್ಯರಿಗೆ ಪ್ರಮಾಣವಚನ ಅಥವಾ ದೃಢೀಕರಣವನ್ನು ನೀಡಿದ ನಂತರವೇ ಸಭೆಗಳು ಮತ್ತು ಇತರ ಸದನ ಪ್ರಕ್ರಿಯೆಗಳಲ್ಲಿ ಅವರು ಭಾಗವಹಿಸಬಹುದು. ಅವರು ಸಂಬಳ ಮತ್ತು ಇತರ ಸವಲತ್ತುಗಳನ್ನು ಪಡೆಯಲು ಕೂಡ ಆಗಲೇ ಅರ್ಹರಾಗಿರುತ್ತಾರೆ.
ಕೊರೊನಾವೈರಸ್ನಿಂದ ಉಂಟಾದ ಸಂಕಷ್ಟದ ಕಾರಣದಿಂದಾಗಿ ಮೊದಲ ಬಾರಿಗೆ ಚೇಂಬರ್ ಆಫ್ ಹೌಸ್ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ನಡೆಸಲು ನಿರ್ಧರಿಸಲಾಗಿದೆ. ಸಾಮಾನ್ಯವಾಗಿ ಅಧಿವೇಶನದಲ್ಲಿ ಅಥವಾ ರಾಜ್ಯ ಸಭಾ ಅಧ್ಯಕ್ಷರ ಕೊಠಡಿಯಲ್ಲಿ ನಡೆಸಲಾಗುತ್ತದೆ.
ಸಾಮಾಜಿಕ ಅಂತರದ ನಿಯಮಗಳಿಗೆ ಬದ್ಧವಾಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. 20 ರಾಜ್ಯಗಳ 61 ಸದಸ್ಯರುಗಳು ಪ್ರಮಾಣವಚನವನ್ನು ಸ್ವೀಕಾರ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಸದಸ್ಯರುಗಳ ಕುಟುಂಬ ಸದಸ್ಯರಿಗೆ ಮತ್ತು ಅತಿಥಿಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.
ಈ ಬಗ್ಗೆ ಈಗಾಗಲೇ ನೂತನ ಸದಸ್ಯರುಗಳಿಗೆ ಮಾಹಿತಿಯನ್ನು ನೀಡಲಾಗಿದೆ. ಈ ಸಮಾರಂಭದಲ್ಲಿ ಭಾಗಿಯಾಗಲು ಸಾಧ್ಯವಾಗದ ಸದಸ್ಯರುಗಳು ಆಗಸ್ಟ್ 15ರ ಬಳಿಕ ಆರಂಭವಾಗಲಿರುವ ಮಳೆಗಾಲದ ಅಧಿವೇಶನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.