News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಎಲ್ಲರನ್ನೊಳಗೊಳ್ಳುವ ಅಭಿವೃದ್ಧಿಯ ಮಂತ್ರ ಪಠಿಸುತ್ತದೆ ಭಾರತ : ನರೇಂದ್ರ ಮೋದಿ

ನವದೆಹಲಿ: ಕೊರೋನಾ ಸಂಕಷ್ಟದಿಂದ ದೇಶವನ್ನು ಪಾರು ಮಾಡುವುದರ ಜೊತೆಗೆ ಸುಮಾರು 150 ರಾಷ್ಟ್ರಗಳಿಗೆ ಭಾರತ ನೆರವಿನ ಹಸ್ತ ಚಾಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಶ್ವ ಸಂಸ್ಥೆಯ 75 ನೇ ವರ್ಷಾಚರಣೆಯ ಆರ್ಥಿಕ, ಸಾಮಾಜಿಕ ಶೃಂಗಸಭೆಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ನಮೋ, ವಿಶ್ವ ಸಂಸ್ಥೆಯ 193 ರಾಷ್ಟ್ರಗಳಲ್ಲಿ ಭಾರತವೂ ಒಂದಾಗಿದೆ. ವಿಶ್ವದ ವಿಚಾರದಲ್ಲಿಯೂ ಭಾರತ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದೆ. ಎಲ್ಲರನ್ನೊಳಗೊಳ್ಳುವ ಅಭಿವೃದ್ಧಿಯ ಮಂತ್ರವನ್ನು ಭಾರತ ಪಠಿಸುತ್ತಿದೆ ಎಂದು ಹೇಳಿದ್ದಾರೆ.

ಆರ್ಥಿಕ, ಸಾಮಾಜಿಕ ಬದ್ಧತೆಗೆ ವಿಶ್ವ ಸಂಸ್ಥೆ ಸಾಕ್ಷಿಯಾಗಿದೆ. ಕೊರೋನಾ ಸಂಕಷ್ಟ ಎಲ್ಲ ದೇಶಗಳ ಶಕ್ತಿ ಪರೀಕ್ಷೆ ನಡೆಸಿದ್ದು ,ಈ ಸಂದರ್ಭದಲ್ಲಿ ಭಾರತ ನೆರೆಯ ರಾಷ್ಟ್ರಗಳಿಗೆ ಕ್ಷಿಪ್ರ ನೆರವು ನೀಡುವ ಮೂಲಕ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿದೆ. ಕೊರೋನಾದಿಂದಾಗಿ ವಿಶ್ವದ ಎಲ್ಲಾ ರಾಷ್ಟ್ರಗಳ ಆರ್ಥಿಕತೆ ಕುಸಿತವಾಗಿದ್ದು, ಭಾರತವೂ ಇದಕ್ಕೆ ಹೊರತಾಗಿಲ್ಲ‌. ದೇಶ ಆರ್ಥಿಕತೆಯನ್ನು ಮತ್ತೆ ಬಲಪಡಿಸುವುದಾಗಿಯೂ ಮೋದಿ ಈ ಸಂದರ್ಭ ಭರವಸೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top