ಶ್ರೀನಗರ: ಭಾರತವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಜಮ್ಮು-ಕಾಶ್ಮೀರದಲ್ಲಿ ದುಷ್ಕರ್ತ್ಯಗಳನ್ನು ಎಸಗಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರ ವಿರುದ್ಧ ಭಾರತೀಯ ಭದ್ರತಾ ಪಡೆಗಳು ಸಮರವನ್ನೇ ಸಾರುತ್ತಿದ್ದು, ಈಗಾಗಲೇ ಕೆಲವು ತಿಂಗಳುಗಳಿಂದ ಅಲ್ಲಿ ಉಗ್ರರ ಮಾರಣಹೋಮವೇ ನಡೆಯುತ್ತಿದೆ. ಅನೇಕ ಉಗ್ರರನ್ನು ನೆಲಕ್ಕುರುಳಿಸುವ ಮೂಲಕ ಯೋಧರು ಕಣಿವೆ ರಾಜ್ಯವನ್ನು ಸ್ವಚ್ಛಗೊಳಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬರುತ್ತಿದ್ದಾರೆ.
ಶುಕ್ರವಾರ ಮೂವರು ಜೈಶೇ ಉಗ್ರರನ್ನು ಸಂಹರಿಸಿದ್ದ ಭದ್ರತಾ ಪಡೆಗಳು, ಇಂದು ಮತ್ತೆ ಜಮ್ಮು- ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಂಶಿಪೋರ್ ಪ್ರದೇಶದಲ್ಲಿ ಗುಂಡಿನ ದಾಳಿಯನ್ನು ನಡೆಸಿ 3 ಉಗ್ರರು ಸಂಹರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಹೀಗಾಗಿ ಕಳೆದ 24 ಗಂಟೆಗಳಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.
ಈ ಪ್ರದೇಶದಲ್ಲಿ ಮತ್ತಷ್ಟು ಉಗ್ರಗಾಮಿಗಳು ಅಡಗಿಕೊಂಡಿರುವ ಸಂದೇಹವಿದ್ದು, ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ನಿನ್ನೆ ಕುಲ್ಗಾಂ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಗಳು ನಡೆಸಿದ್ದ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ವಧಿಸಲಾಗಿತ್ತು.
ಈ ಪ್ರದೇಶಲ್ಲಿ ಉಗ್ರಗಾಮಿಗಳು ರಹಸ್ಯ ಕಾರ್ಯಾಚರಣೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯನ್ನು ಪಡೆದುಕೊಂಡ ಭದ್ರತಾ ಪಡೆಯ ಸಿಬ್ಬಂದಿಗಳು ಇಂದು ಮುಂಜಾನೆ ಉಗ್ರ ನಿಗ್ರಹ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಈ ಸಂದರ್ಭದಲ್ಲಿ ಭದ್ರತಾ ಪಡೆಗಳ ಗುಂಡಿಗೆ ಮೂವರು ಉಗ್ರರ ಸಂಹಾರವಾಗಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.