ಅಮೇಥಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸ್ಮೃತಿ ಇರಾನಿ ಅವರು ವಿಶೇಷ ಸಾರ್ವಜನಿಕ ಕಾರ್ಯಕ್ರಮ ‘ ಆಪ್ಕಿ ದೀದಿ, ಆಪ್ಕಿ ದೇವರ್’ ಅನ್ನು ತಮ್ಮ ಲೋಕಸಭಾ ಕ್ಷೇತ್ರ ಅಮೇಥಿಯಲ್ಲಿ ಪ್ರಾರಂಭಿಸಿದ್ದಾರೆ.
ಇ-ಚೌಪಲ್ಸ್ ಮೂಲಕ ಜನರ ಕುಂದುಕೊರತೆಗಳನ್ನು ಆಲಿಸಿ ಅದಕ್ಕೆ ಸೂಕ್ತ ಪರಿಹಾರಗಳನ್ನು ಒದಗಿಸುವ ಉದ್ದೇಶವನ್ನು ಈ ವಿಶೇಷ ಕಾರ್ಯಕ್ರಮವು ಹೊಂದಿದೆ.
ತಮ್ಮ ಲೋಕಸಭಾ ಕ್ಷೇತ್ರದ ಜನರಿಂದ ದೀದಿ ಎಂದು ಕರೆಯಲ್ಪಡುವ ಸ್ಮೃತಿ ಇರಾನಿ ಅವರ ಈ ವಿಶೇಷ ಕಾರ್ಯಕ್ರಮಕ್ಕೆ ಕ್ಷೇತ್ರದ ಜನರು ಅತೀವ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಈ ಕಾರ್ಯಕ್ರಮವು 24ರಿಂದ 28 ಗಂಟೆಗಳ ಒಳಗೆ ಜನರ ಸಮಸ್ಯೆಗಳಿಗೆ ಪರಿಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ.
ಉದಾಹರಣೆಗೆ, ಅಮೇಥಿಯ ಎರಡು ಕುಟುಂಬಗಳಿಗೆ ಈ ಕಾರ್ಯಕ್ರಮದ ಮೂಲಕ ಕೇವಲ 24 ಗಂಟೆಗಳ ಒಳಗೆ ರೇಷನ್ ಕಾರ್ಡ್ ಅನ್ನು ಒದಗಿಸಲಾಗಿದೆ. ವಿದ್ಯುತ್ ಇಲ್ಲದ ಜಗದೀಶ್ಪುರ ನಿವಾಸಿಗಳಿಗೆ 24 ಗಂಟೆಗಳ ಒಳಗೆ ವಿದ್ಯುತ್ ಕಂಬಗಳನ್ನು ಮತ್ತು ವೈಯರ್ಗಳನ್ನು ಅಳವಡಿಸಿ ವಿದ್ಯುತ್ತನ್ನು ಪೂರೈಕೆ ಮಾಡಲಾಗಿದೆ. ಜನರ ಚಿಕಿತ್ಸೆಗೂ ಈ ಕಾರ್ಯಕ್ರಮದ ಅಡಿಯಲ್ಲಿ ಬಿಕಿಪುರದಲ್ಲಿ ಸ್ಮೃತಿ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಾರೆ.
ಜುಲೈ 13ರಂದು ಇ-ಚೌಪಲ್ಸ್ಗಳನ್ನು ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಆರಂಭಿಸಲಾಗಿದೆ. ಜುಲೈ 14ರಂದು ಸಚಿವೆ ಜನರಿಂದ ದೂರುಗಳನ್ನು ಆಲಿಸಿ, ಅವುಗಳನ್ನು ಪರಿಹರಿಸಿಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.