ನವದೆಹಲಿ: ಉತ್ತರಾಖಂಡ ರಾಜ್ಯದ ಚಾರ್ಧಾಮ್ ರಸ್ತೆ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಪರಿಶೀಲಿಸಿದ್ದಾರೆ. ಬಾಕಿ ಉಳಿದಿರುವ ಎಲ್ಲಾ ಕುಂದುಕೊರತೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮತ್ತು ಭೂಸ್ವಾಧೀನವನ್ನು ಪೂರ್ಣಗೊಳಿಸಲು ಅವರು ಈ ವೇಳೆ ಅಧಿಕಾರಿಗಳಿಗೆ ಕರೆ ನೀಡಿದರು.
ಉತ್ತರಾಖಂಡ ರಾಜ್ಯದಲ್ಲಿ ಚಾರ್ಧಾಮ್ ಯಾತ್ರೆಗೆ ಆತಿಥ್ಯ ವಹಿಸುವ ಯಮನೋತ್ರಿ, ಗಂಗೋತ್ರಿ, ಬದ್ರಿನಾಥ್ ಮತ್ತು ಕೇದಾರನಾಥವನ್ನು ಸಂಪರ್ಕಿಸಲು ಚಾರ್ಧಾಮ್ ಯೋಜನೆ ಪ್ರಸ್ತಾಪಿಸಿದೆ. ಎಲ್ಲಾ ಹವಮಾನದ ಚಾರ್ಧಾಮ್ ರಸ್ತೆಯು 826 ಕಿ.ಮೀ ಉದ್ದವಿದ್ದು, 53 ಯೋಜನೆಗಳನ್ನು ಹೊಂದಿದೆ. ಇದರಲ್ಲಿ 12000 ಕೋಟಿ ರೂ.ಹೂಡಿಕೆಯಾಗಲಿದೆ.
ಪರಿಸರ ಸಚಿವ ಪ್ರಕಾಶ್ ಜಾವ್ಡೇಕರ್, ಉತ್ತರಾಖಂಡದ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವ ಜನರಲ್ (ನಿವೃತ್ತ) ವಿ ಕೆ ಸಿಂಗ್ ಮತ್ತು ಎರಡು ಸಚಿವಾಲಯಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಯೋಜನೆಯು ರಾಷ್ಟ್ರೀಯ ಪ್ರಾಮುಖ್ಯತೆಯನ್ನು ಹೊಂದಿದೆ ಮತ್ತು ಸಂಬಂಧಪಟ್ಟವರೆಲ್ಲರೂ ಈ ದೃಷ್ಟಿಕೋನದಿಂದಲೇ ಕಾರ್ಯ ನಿರ್ವಹಿಸಬೇಕು ಎಂದು ಒತ್ತಿ ಹೇಳಿದ ಗಡ್ಕರಿ, ಉತ್ತರಾಖಂಡ ಸಿಎಂ ಅವರು ರಾಜ್ಯ ಸರ್ಕಾರದ ಮಟ್ಟದಲ್ಲಿ ಬಾಕಿ ಇರುವ ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಶೀಲನೆ ನಡೆಸಬೇಕೆಂದು ವಿನಂತಿಸಿದರು. ವಿಶೇಷವಾಗಿ ಪರಿಸರ, ಭೂಸ್ವಾಧೀನ ಇತ್ಯಾದಿಗಳಿಗೆ ಸಂಬಂಧಿಸಿದ ವಿಷಯಗಳನ್ನು ಕಟ್ಟುನಿಟ್ಟಾಗಿ ಮೇಲ್ವಿಚಾರಣೆ ಮಾಡಬೇಕು ಮತ್ತು ಉದ್ದೇಶಪೂರ್ವಕ ವಿಳಂಬದ ವಿರುದ್ಧ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಪರಿಸರ ಸಚಿವ ಜಾವ್ಡೇಕರ್, “ಉನ್ನತ ಸಾರಿಗೆ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಯೋಜನೆಯ ಅನುಷ್ಠಾನವನ್ನು ಕೈಗೆತ್ತಿಕೊಳ್ಳುತ್ತದೆ. ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಪರಿಸರ ಸಚಿವಾಲಯದಿಂದ ಅಗತ್ಯವಿರುವ ಎಲ್ಲ ಸಹಕಾರವನ್ನು ವಿಸ್ತರಿಸುವುದಾಗಿ ಭರವಸೆ ನೀಡುತ್ತೇವೆ” ಎಂದು ಒತ್ತಿ ಹೇಳಿದರು.
“ಉತ್ತರಾಖಂಡ ಸರ್ಕಾರವು ಸಿದ್ಧಪಡಿಸಿದ ಮತ್ತು ಜಲಶಕ್ತಿ ಸಚಿವಾಲಯದಿಂದ ಮೌಲ್ಯಮಾಪನ ಮಾಡಲ್ಪಟ್ಟ ಭಾಗೀರಥಿ ಪರಿಸರ ಸಂವೇದನಾ ವಲಯದ ವಲಯ ಮಾಸ್ಟರ್ ಪ್ಲ್ಯಾನ್ ಅನ್ನು ಜುಲೈ 16, 2020 ರಂದು ಅಂಗೀಕರಿಸಲಾಗಿದೆ” ಎಂದು ಜವ್ಡೇಕರ್ ಮಾಹಿತಿ ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.