ಬೆಂಗಳೂರು: ಈ ವರೆಗೆ ಕಂದಾಯ ಇಲಾಖೆಯ ಅಧಿಕಾರ ವ್ಯಾಪ್ತಿಗೆ ಒಳಪಟ್ಟಿದ್ದ ಜನನ, ಮರಣ ಪ್ರಮಾಣಪತ್ರ ವಿತರಣಾ ಅಧಿಕಾರವನ್ನು ಇದೀಗ ಪಿಡಿಒ(ಪಂಚಾಯತ್ ಡೆವಲಪ್ಮೆಂಟ್ ಆಫೀಸರ್) ಗಳಿಗೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಯೋಜನಾ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಈ ಅಧಿಕಾರವನ್ನು ಗ್ರಾಮ ಪಂಚಾಯತ್ ಗಳಿಗೆ ನೀಡಬಹುದು ಎಂದು ಸೂಚಿಸಿದ್ದರು. ಪ್ರಸ್ತುತ ಈ ಅಧಿಕಾರವನ್ನು ಪಂಚಾಯತ್ ಡೆವಲಪ್ಮೆಂಟ್ ಆಫೀಸರ್ ಗೆ ನೀಡಿ ಸರ್ಕಾರ ಸೂಚನೆ ಹೊರಡಿಸಿದೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಜನನ, ಮರಣ ಪ್ರಮಾಣಪತ್ರ ನೀಡುವ ಕೆಲಸವನ್ನು ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಮಾಡುವಂತೆಯೂ ಸರ್ಕಾರ ತಿಳಿಸಿದೆ. ಜೊತೆಗೆ ಸರ್ಕಾರ ಆಗಿಂದಾಗ್ಗೆ ನಿಗದಿ ಪಡಿಸುವ ಶುಲ್ಕವನ್ನು ಸಂಗ್ರಹಿಸಿ ನೀಡುವಂತೆಯೂ ಪಿಡಿಒಗಳಿಗೆ ಈ ಆದೇಶದ ಮೂಲಕ ತಿಳಿಸಲಾಗಿದೆ.
ರಾಷ್ಟ್ರೀಯ ಜನನ, ಮರಣ ಕಾಯ್ದೆ 1969 ರ ಅಧ್ಯಾಯ 5 ರ ಪ್ರಕರಣ 27 ರ ಅಡಿಯಲ್ಲಿ ತಕ್ಷಣವೇ ಇ- ತಂತ್ರಜ್ಞಾನ ದಲ್ಲಿ ಡಿಜಿಟಲ್ ಸಹಿಗಳನ್ನು ಮಾಡುವ ಮೂಲಕ ಪಿಡಿಒ ಗಳನ್ನು ಪ್ರಮಾಣಪತ್ರ ವಿತರಣಾಧಿಕಾರಿಗಳನ್ನಾಗಿ ಮಾಡುವಂತೆಯೂ ಸರ್ಕಾರ ಈ ಆದೇಶದಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.