ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರದ ‘ಭೂಮಿ ಪೂಜನ’ ಸಮಾರಂಭ ಆಗಸ್ಟ್ 5 ರಂದು ನಡೆಯಲಿದ್ದು, ‘ಭೂಮಿ ಪೂಜನ’ ಸಮಾರಂಭದಲ್ಲಿ 250 ಅತಿಥಿಗಳು ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆಯ ಪ್ರಮುಖ ಸಂತರು ಮತ್ತು ರಾಮ ಮಂದಿರ ಚಳವಳಿಗೆ ಸಂಬಂಧಿಸಿದ ಎಲ್ಲಾ ಹಿರಿಯರು ‘ಭೂಮಿ ಪೂಜನ’ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ರಾಷ್ಟ್ರೀಯ ಸ್ವಯಂಸೇವಕ ಸಂಘ ಮತ್ತು ವಿಶ್ವ ಹಿಂದೂ ಪರಿಷತ್ನ ಕೆಲವು ಹಿರಿಯ ಪದಾಧಿಕಾರಿಗಳನ್ನು ಕೂಡ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಈ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನಿಸಲಿದೆ ಎಂದು ತಿಳಿದುಬಂದಿದೆ.
ವರದಿಗಳ ಪ್ರಕಾರ, ಕೊರೋನಾವೈರಸ್ ಸಾಂಕ್ರಾಮಿಕ ರೋಗದಿಂದಾಗಿ ಸೀಮಿತ ಸಂಖ್ಯೆಯ ಜನರು ಮಾತ್ರ ಭಾಗವಹಿಸಲಿದ್ದಾರೆ. ಸಮಾರಂಭದಲ್ಲಿ ಕೆಲವು ಹಿರಿಯ ಕೇಂದ್ರ ಸಚಿವರು ಮತ್ತು ಉತ್ತರ ಪ್ರದೇಶದ ಮಂತ್ರಿಗಳು ಹಾಜರಾಗಲಿದ್ದಾರೆ.
ಆಗಸ್ಟ್ 5 ರಂದು ಅಯೋಧ್ಯೆಯ ರಾಮ ದೇವಾಲಯದ ‘ಭೂಮಿ ಪೂಜನ’ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಗಸ್ಟ್ 5 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1: 10 ರವರೆಗೆ ಪ್ರಧಾನಿ ಅಯೋಧ್ಯೆಯಲ್ಲಿ ಉಳಿಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ರಾಮ ದೇವಾಲಯದ ‘ಭೂಮಿ ಪೂಜನ’ ಸಮಾರಂಭಕ್ಕೆ ಸಂಬಂಧಿಸಿದ ಪ್ರಾರ್ಥನೆಗಳು ಮತ್ತು ಇತರ ಆಚರಣೆಗಳು ಆಗಸ್ಟ್ 5 ರಂದು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿವೆ.
ಪಿಎಂ ಮೋದಿಯವರ ಸಂಸದೀಯ ಕ್ಷೇತ್ರವಾದ ವಾರಣಾಸಿ ಮತ್ತು ಕಾಶಿಯ ಕೆಲವು ಪುರೋಹಿತರು ಸಹ ‘ಭೂಮಿ ಪೂಜನ’ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.