ಬೆಂಗಳೂರು: ಕೊರೋನಾ ಸೋಂಕು ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಸೋಂಕು ನಿಯಂತ್ರಣ, ರೋಗಿಗಳಿಗೆ ಸಮರ್ಪಕ ಚಿಕಿತ್ಸೆ , ಕೋವಿಡ್-19 ಮಾದರಿ ಪರೀಕ್ಷೆ ಇವೆಲ್ಲವೂ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸದಾಗಿ 20 ಕೊರೋನಾ ಟೆಸ್ಟಿಂಗ್ ಲ್ಯಾಬ್ ಗಳನ್ನು ಆರಂಭ ಮಾಡಲಾಗುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರು ಹೆಚ್ಚುತ್ತಿದ್ದು, ಮಾದರಿ ಪರೀಕ್ಷೆ ನಡೆಸುವ ಹೆಚ್ಚಿನ ಪರೀಕ್ಷಾ ಕೇಂದ್ರಗಳ ಅಗತ್ಯತೆ ಇದೆ. ಈ ಅಗತ್ಯತೆಯನ್ನು ಮನಗಂಡು ರಾಜ್ಯ ಸರ್ಕಾರ ಹೆಚ್ಚುವರಿ ಲ್ಯಾಬ್ ಗಳನ್ನು ಆರಂಭಿಸಲು ಮುಂದಾಗಿದೆ. ರಾಜ್ಯದಲ್ಲಿ ಈ ವರೆಗೆ ಪ್ರತಿನಿತ್ಯ 35 ಸಾವಿರಕ್ಕೂ ಅಧಿಕ ಜನರಿಗೆ ಕೊರೋನಾ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಪರೀಕ್ಷೆಗಳನ್ನು ಹೆಚ್ಚಿಸಿ ಸೋಂಕಿತರಿಗೆ ಶೀಘ್ರ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಆ ಮೂಲಕ ಕೊರೋನಾ ಸೋಂಕು ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದೆ.
ಇನ್ನು ಬೆಂಗಳೂರಿಗೆ ಸಂಬಂಧಿಸಿದಂತೆ 198 ವಾರ್ಡ್ ಗಳ ಸಿಬ್ಬಂದಿಗಳಿಗೆ ಬೂತ್ ಮಟ್ಟದಲ್ಲಿ ತರಬೇತಿ ನೀಡಿ, ಅವರನ್ನು ಮನೆಮನೆಗೆ ಕಳುಹಿಸಿ ಸೋಂಕು ಪರೀಕ್ಷೆ ನಡೆಸಲಾಗುತ್ತಿದೆ. ಈ ತರಬೇತಿ ಪಡೆದ ಸಿಬ್ಬಂದಿಗಳು ಪ್ರತಿನಿತ್ಯ 400 ಮನೆಗಳಿಗೆ ತೆರಳಿ ಕೊರೋನಾ ಮಾದರಿಗಳ ಪರೀಕ್ಷೆ ನಡೆಸುವ ಕೆಲಸವನ್ನು ಮಾಡುತ್ತಿದ್ದಾರೆ. ಆ ಮೂಲಕವೂ ಸೋಂಕಿತರ ಶೀಘ್ರ ಚಿಕಿತ್ಸೆಗೆ ಸರ್ಕಾರ ಕ್ರಮ ತೆಗೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.