ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ವಿದೇಶದಲ್ಲಿ ಸಿಲುಕಿ ಹಾಕಿಕೊಂಡಿರುವ ಭಾರತೀಯರನ್ನು ಮತ್ತೆ ಸ್ವದೇಶಕ್ಕೆ ಕರೆತರಲು ಆರಂಭಿಸಲಾದ ವಂದೇ ಭಾರತ್ ಮಿಷನ್ ನ ನಾಲ್ಕನೇ ಹಂತದ ಕಾರ್ಯಾಚರಣೆಯಲ್ಲಿ ಒಟ್ಟು 66 ವಿಮಾನಗಳಲ್ಲಿ 11,503 ಮಂದಿ ರಾಜ್ಯಕ್ಕೆ ಆಗಮಿಸಲಿದ್ದಾರೆ.
ಈ ವಿಶೇಷ ವಿಮಾನಗಳನ್ನು ಏರ್ ಇಂಡಿಯಾ, ಏರ್ ಇಂಡಿಯಾ ಎಕ್ಸ್ಪ್ರೆಸ್ ಸಂಸ್ಥೆಗಳು ನಿರ್ವಹಿಸಲಿವೆ. ಈ ಕಾರ್ಯಾಚರಣೆಯಡಿಯಲ್ಲಿ ಕೊಲ್ಲಿ ರಾಷ್ಟ್ರಗಳಿಂದ ಜನರನ್ನು ಹೊತ್ತು ವಿಮಾನ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದರೆ, ಹೆಚ್ಚಿನ ವಿಮಾನಗಳು ಪ್ರಯಾಣಿಕರನ್ನು ಬೆಂಗಳೂರಿಗೆ ಕರೆತರಲಿದೆ ಎಂದು ಮೂಲಗಳು ಮಾಹಿತಿ ನೀಡಿವೆ. ಪ್ರಸ್ತಾವಿತ 66 ವಿಮಾನಗಳಲ್ಲಿ ಮೂರನೇ ಒಂದು ಭಾಗದಷ್ಟು ವಿಮಾನಗಳು ಇನ್ನೂ ಕರ್ನಾಟಕಕ್ಕೆ ಬರಬೇಕಾಗಿದ್ದು, ತಾತ್ಕಾಲಿಕ ಬದಲಾವಣೆಗಳಿಗೂ ಒಳಪಟ್ಟು ಕಾರ್ಯಾಚರಣೆ ನಡೆಸಲಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೇಂದ್ರದ ನಿಯಮಾವಳಿಯಂತೆ ಆಗಸ್ಟ್ 1 ಕ್ಕೆ ನಾಲ್ಕನೇ ಹಂತದ ವಂದೇ ಭಾರತ್ ಮಿಷನ್ ಕಾರ್ಯಾಚರಣೆ ಸಂಪೂರ್ಣವಾಗಲಿದ್ದು, ಅತೀ ಹೆಚ್ಚು ಪ್ರಯಾಣಿಕರು ಕೊಲ್ಲಿ ರಾಷ್ಟ್ರಗಳಿಂದ ಆಗಮಿಸಲಿದ್ದಾರೆ. ಕೊಲ್ಲಿ ರಾಷ್ಟ್ರಗಳಿಂದ 22 ವಿಮಾನ, ಯುಎಸ್ ನಿಂದ 10, ಯುಕೆ ನಿಂದ 8, ಜರ್ಮನಿ ಮತ್ತು ಸಿಂಗಾಪುರ ದಿಂದ ತಲಾ 2, ಕೆನಡಾ ದಿಂದ 3, ದ. ಆಫ್ರಿಕಾ, ಸ್ವೀಡನ್, ಜಪಾನ್, ಮಲೇಷ್ಯಾ ದಿಂದ ತಲಾ 1 ವಿಮಾನಗಳು ರಾಜ್ಯಕ್ಕೆ ಪ್ರಯಾಣಿಕರನ್ನು ಹೊತ್ತು ತರಲಿರುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.