ನವದೆಹಲಿ: ಕೊರೋನಾವೈರಸ್ ಮತ್ತು ಪ್ರವಾಹದ ಪರಿಸ್ಥಿತಿಗಳ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ದೂರವಾಣಿ ಸಂವಾದ ನಡೆಸಿದರು. ಅವರು ಬಿಹಾರ, ಅಸ್ಸಾಂ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಹಿಮಾಚಲ ಪ್ರದೇಶ, ಮತ್ತು ಉತ್ತರಾಖಂಡದ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು.
ಅಸ್ಸಾಂ ಮತ್ತು ಬಿಹಾರದಂತಹ ರಾಜ್ಯಗಳು ಮಳೆಗಾಲದಲ್ಲಿ ಪ್ರವಾಹದಿಂದಾಗಿ ತೊಂದರೆ ಅನುಭವಿಸುತ್ತಿವೆ. ಅಸ್ಸಾಂ ಸಿಎಂ ಸರ್ಬಾನಂದ ಸೋನೊವಾಲ್ ಅವರೊಂದಿಗಿನ ದೂರವಾಣಿ ಸಂಭಾಷಣೆಯಲ್ಲಿ ಪಿಎಂ ಮೋದಿ ಅವರು ಈವರೆಗೆ 84 ಜೀವಗಳನ್ನು ಬಲಿ ಪಡೆದಿರುವ ಪ್ರವಾಹವನ್ನು ಎದುರಿಸಲು ಅಸ್ಸಾಂಗೆ ಎಲ್ಲ ಬೆಂಬಲ ನೀಡುವುದಾಗಿ ಭರವಸೆ ನೀಡಿದರು.
ಕೋವಿಡ್ -19 ನಿಂದ ಪೀಡಿತಗೊಂಡ ಸೇನಾ ಸೈನಿಕರ ಬಗ್ಗೆ ವಿಚಾರಿಸಲು ಪಿಎಂ ಮೋದಿ ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರಿಗೆ ಕರೆ ಮಾಡಿ ಮಾತನಾಡಿದರು ಮತ್ತು ಸೇನಾ ಸಿಬ್ಬಂದಿಯ ಚಿಕಿತ್ಸೆಗೆ ಬೇಕಾದ ಎಲ್ಲಾ ಸಹಾಯವನ್ನು ಮಾಡುವ ಭರವಸೆ ನೀಡಿದರು. ಅಲ್ಲಿ ಒಟ್ಟು 110 ಸೇನಾ ಸಿಬ್ಬಂದಿಯಲ್ಲಿ ಕೋವಿಡ್ ಕಾಣಿಸಿಕೊಂಡಿದೆ ಎಂದು ಶನಿವಾರ ರಾವತ್ ಹೇಳಿದ್ದಾರೆ. ಈ ಪೈಕಿ ಕಳೆದ 3 ರಿಂದ 4 ದಿನಗಳಲ್ಲಿ ಸುಮಾರು 100 ಪ್ರಕರಣಗಳು ದಾಖಲಾಗಿವೆ.
ಅವರಲ್ಲದೆ, ಪ್ರಧಾನಿ ಮೋದಿ ಅವರು ಬಿಹಾರ ಸಿಎಂ ನಿತೀಶ್ ಕುಮಾರ್, ಆಂಧ್ರಪ್ರದೇಶದ ಸಿಎಂ ವೈ.ಎಸ್ ಜಗನ್ ಮೋಹನ್ ರೆಡ್ಡಿ, ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್, ತಮಿಳುನಾಡು ಸಿಎಂ ಎಡಪ್ಪಾಡಿ ಕೆ.ಪಳನಿಸ್ವಾಮಿ, ಮತ್ತು ಹಿಮಾಚಲ ಪ್ರದೇಶದ ಸಿಎಂ ಜೈ ರಾಮ್ ಠಾಕೂರ್ ಅವರೊಂದಿಗೂ ದೂರವಾಣಿ ಸಂಭಾಷಣೆ ನಡೆಸಿದರು.
ಈ ಎಲ್ಲಾ ರಾಜ್ಯಗಳು ಕೊರೋನಾವೈರಸ್ ಪ್ರಕರಣಗಳ ಉಲ್ಬಣಕ್ಕೆ ಸಾಕ್ಷಿಯಾಗಿವೆ. ಮಹಾರಾಷ್ಟ್ರದ ನಂತರ ದೇಶದಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಎರಡನೇ ರಾಜ್ಯ ತಮಿಳುನಾಡು ಆಗಿದೆ. ಅಸ್ಸಾಂ, ಬಿಹಾರ, ಆಂಧ್ರಪ್ರದೇಶ, ಮತ್ತು ತೆಲಂಗಾಣದಂತಹ ರಾಜ್ಯಗಳು ಕೂಡ ಇತ್ತೀಚೆಗೆ ಪ್ರಕರಣಗಳಲ್ಲಿ ಭಾರೀ ಹೆಚ್ಚಳವನ್ನು ಕಾಣುತ್ತಿವೆ.
Hon’ble PM Shri @narendramodi ji took stock of the contemporary situation regarding #AssamFloods2020, #COVID19 and Baghjan Oil Well fire scenario over phone this morning.
Expressing his concern & solidarity with the people, the PM assured all support to the state.
— Sarbananda Sonowal (@sarbanandsonwal) July 19, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.