ಭೋಪಾಲ್: ಮಧ್ಯಪ್ರದೇಶದ ರಾಜ್ಯಪಾಲ ಲಾಲ್ಜೀ ಟಂಡನ್ ಅವರು ಇಂದು ಬೆಳಿಗ್ಗೆ ಇಹಲೋಕವನ್ನು ತ್ಯಜಿಸಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಉಸಿರಾಟದ ಸಮಸ್ಯೆ ಹೊಂದಿದ್ದ ಅವರನ್ನು ಜೂನ್ 11ರಂದು ಮೇದಾಂತ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟರು.
ರಾಜ್ಯಪಾಲರ ನಿಧನವನ್ನು ಅವರ ಪುತ್ರ ಅಶುತೋಷ್ ಟಂಡನ್ ಟ್ವಿಟ್ಟರ್ ನಲ್ಲಿ ಪ್ರಕಟಿಸಿದ್ದಾರೆ.
ಲಾಲ್ಜೀ ಟಂಡನ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.
ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಲಾಲ್ಜೀ ಟಂಡನ್ ಅವರು ಸಮಾಜದ ಸೇವೆಗಾಗಿ ಮಾಡಿದ ಸತತ ಪ್ರಯತ್ನಗಳಿಗಾಗಿ ಸ್ಮರಣೀಯರಾಗಿದ್ದಾರೆ. ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಬಲಪಡಿಸುವಲ್ಲಿ ಟಂಡನ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರು ಪರಿಣಾಮಕಾರಿ ಆಡಳಿತಗಾರರಾಗಿ ಛಾಪು ಮೂಡಿಸಿದರು, ಯಾವಾಗಲೂ ಸಾರ್ವಜನಿಕ ಕಲ್ಯಾಣಕ್ಕೆ ಪ್ರಾಮುಖ್ಯತೆ ನೀಡಿದರು. ಅವರ ನಿಧನ ದುಃಖ ತಂದಿದೆ” ಎಂದಿದ್ದಾರೆ.
ಹಿರಿಯ ರಾಜಕಾರಣಿಯಾಗಿದ್ದ ಟಂಡನ್ ಅವರ ಸಾವಿನ ಬಗ್ಗೆ ಇನ್ನೂ ಅನೇಕ ರಾಜಕಾರಣಿಗಳು ದುಃಖ ವ್ಯಕ್ತಪಡಿಸಿದ್ದಾರೆ. “ಕಾರ್ಯಕರ್ತರಲ್ಲಿ ಟಂಡನ್ ಜನಪ್ರಿಯರಾಗಿದ್ದಾರೆ ಮತ್ತು ಅಭಿವೃದ್ಧಿಗೆ ಬದ್ಧರಾಗಿದ್ದರು. ಲಕ್ನೋ ಮತ್ತು ಉತ್ತರ ಪ್ರದೇಶದ ಜನರಿಗೆ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳಲ್ಲಿ ಟಂಡನ್ ಅವರ ಸಾರ್ವಜನಿಕ ಸೇವೆಯ ಸಮರ್ಪಣೆಯನ್ನು ಕಾಣಬಹುದು” ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
“ಮಧ್ಯಪ್ರದೇಶದ ಗವರ್ನರ್ ಲಾಲ್ಜಿ ಟಂಡನ್ ಅವರ ಸಾವಿನ ಸುದ್ದಿ ಕೇಳಿ ನನಗೆ ಬೇಸರವಾಗಿದೆ. ಪ್ರತಿಕೂಲ ಪರಿಸ್ಥಿತಿಯಲ್ಲಿ, ಜನಸಂಘವನ್ನು ಮತ್ತು ನಂತರ ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಬಲಪಡಿಸಲು ಟಂಡನ್ ಜಿ ದೊಡ್ಡ ಕೊಡುಗೆ ನೀಡಿದ್ದಾರೆ” ಎಂದು ಸಚಿವ ನಿತಿನ್ ಗಡ್ಕರಿ ಟ್ವಿಟ್ ಮಾಡಿದ್ದಾರೆ.
Shri Lalji Tandon will be remembered for his untiring efforts to serve society. He played a key role in strengthening the BJP in Uttar Pradesh. He made a mark as an effective administrator, always giving importance of public welfare. Anguished by his passing away. pic.twitter.com/6GeYOb5ApI
— Narendra Modi (@narendramodi) July 21, 2020
मध्य प्रदेश के राज्यपाल एवं उत्तर प्रदेश की एक क़द्दावर शख़्सियत, श्री लालजी टंडन के निधन का समाचार बहुत पीड़ादायक है।
टंडनजी के साथ मुझे लम्बे समय तक काम करने का अवसर मिला। उनका लम्बा सार्वजनिक जीवन जनता की सेवा में समर्पित रहा और उन्होंने अपने काम से एक अलग छाप छोड़ी है। १/२
— Rajnath Singh (@rajnathsingh) July 21, 2020
मध्यप्रदेश के राज्यपाल लालजी टंडन जी के निधन का समाचार सुनकर दुःखी हूं। प्रतिकूल स्थिति में पहले जनसंघ और फिर भाजपा को उत्तर प्रदेश में मजबूत करने में टंडन जी का बड़ा योगदान रहा है।
— Nitin Gadkari (@nitin_gadkari) July 21, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.