News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ವೈದ್ಯಕೀಯ ಉಪಕರಣ ಖರೀದಿಯ ದಾಖಲೆ ನೀಡಿ ಕಾಂಗ್ರೆಸ್‌ಗೆ ರಾಜ್ಯ ಸರ್ಕಾರದ ತಿರುಗೇಟು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಾಂಡವವಾಡುತ್ತಿದ್ದು, ರಾಜ್ಯ ಸರ್ಕಾರ ಕೊರೋನಾ ಚಿಕಿತ್ಸೆಗೆ ಉಪಕರಣಗಳ ಖರೀದಿಯಲ್ಲಿ ಅಕ್ರಮ ಎಸಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ರಾಜ್ಯ ಸರ್ಕಾರ ಕೊರೋನಾ ನಿಯಂತ್ರಣದ ಭಾಗವಾಗಿ ಆರೋಗ್ಯ ಇಲಾಖಾ ವತಿಯಿಂದ 290 ಕೋಟಿ ರೂ. ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ವತಿಯಿಂದ 33 ಕೋಟಿ ರೂ. ಒಟ್ಟಾಗಿ 323 ಕೋಟಿ ರೂ. ಗಳ ವೈದ್ಯಕೀಯ ಉಪಕರಣಗಳನ್ನು ಖರೀದಿ ಮಾಡಲಾಗಿದೆ ಎಂದು ತಿಳಿಸಿದೆ.

ಈ ಸಂಬಂಧ ಆರೋಗ್ಯ ಸಚಿವ ಶ್ರೀರಾಮುಲು ಮತ್ತು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಅವರು ವೈದ್ಯಕೀಯ ಉಪಕರಣ ಖರೀದಿಯ ಅಂಕಿ ಅಂಶಗಳ ದಾಖಲೆಗಳನ್ನು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿ, ಈ ಖರೀದಿಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಕೊರೋನಾ ವಿಚಾರದಲ್ಲಿ ರಾಜ್ಯ ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಅತ್ಯುತ್ತಮವಾಗಿ ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಲು ಶ್ರಮಿಸುತ್ತಿದ್ದಾರೆ. ಆರೋಗ್ಯ ಸುವ್ಯವಸ್ಥೆ ಗೆ ಬೇಕಾದ ವೈದ್ಯಕೀಯ ಸಲಕರಣೆಗಳನ್ನು ಖರೀದಿಸಿ ಚಿಕಿತ್ಸೆಗೆ ಸರಿಯಾದ ವ್ಯವಸ್ಥೆ ಮಾಡಿಕೊಡುವ ಕೆಲಸವನ್ನು ರಾಜ್ಯ ಬಿಜೆಪಿ ಸರ್ಕಾರ ಮಾಡುತ್ತಿದೆ. ಈ ವಿಚಾರದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಕಾಂಗ್ರೆಸ್ ನಾಯಕರು ಕೊರೋನಾ ಸಂದರ್ಭದಲ್ಲಿಯೂ ಹೊಲಸು ರಾಜಕಾರಣ ಮಾಡಲು ಮುಂದಾಗಿದ್ದು, ವಿನಾ ಕಾರಣ ಸುಳ್ಳು ಆರೋಪ ಮಾಡುತ್ತಿದ್ದಾರೆ. ಆ ಮೂಲಕ ಕೊರೋನಾ ವಿರುದ್ಧ ಸಮರ್ಥವಾಗಿ ಹೋರಾಟ ನಡೆಸಲು.ಮುಂದಾಗಿರುವ ಸರ್ಕಾರವನ್ನು ವಿಫಲಗೊಳಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದೂ ಹೇಳಿದ್ದಾರೆ.

ಜೊತೆಗೆ ರಾಜ್ಯದಲ್ಲಿ ಕೊರೋನಾ ಆರಂಭದ ದಿನಗಳಲ್ಲಿ ಎನ್95 ಮಾಸ್ಕ್ , ಪಿಪಿಇ ಕಿಟ್ ಗಳು, ವೆಂಟಿಲೇಟರ್ ಗಳ ಕೊರತೆ ರಾಜ್ಯದಲ್ಲಿತ್ತು. ಈ ಸಂದರ್ಭದಲ್ಲಿ ವಿದೇಶಗಳಿಂದ ಆಮದು ಮಾಡಿಕೊಂಡ ಅಗತ್ಯ ಆರೋಗ್ಯ ಉಪಕರಣಗಳ ದಾಖಲೆಗಳನ್ನೂ ಬಿಡುಗಡೆ ಮಾಡಲಾಗಿದ್ದು, ಅನುಮಾನವಿದ್ದವರು ಪರಿಹರಿಸಿಕೊಳ್ಳುವಂತೆ ತಿಳಿಸಿದ್ದಾರೆ. ಜೊತೆಗೆ ವೆಂಟಿಲೇಟರ್ ಖರೀದಿ ವಿಚಾರದಲ್ಲಿಯೂ ಅಕ್ರಮ ಎಸಗಿದ್ದಾಗಿ ಕಾಂಗ್ರೆಸ್ ಆರೋಪಿಸಿದೆ. ಈ ಬಗ್ಗೆಯೂ ಪೂರಕ ದಾಖಲೆಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳು ಸಾಬೀತಾದರೆ ತಾವು ರಾಜೀನಾಮೆ ನೀಡಲು ಸಿದ್ಧ ಎಂದೂ ಸಚಿವ ಶ್ರೀರಾಮುಲು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top