ಬೆಂಗಳೂರು : ದಿಶಾ ಭಾರತ್ ಸಂಸ್ಥೆಯು ಕಾಲೇಜು ವಿದ್ಯಾರ್ಥಿಗಳಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಪೋಷಿಸಿ ಬೆಳೆಸುವ ಕಾರ್ಯದಲ್ಲಿ ಕಳೆದ 15 ವರ್ಷಗಳಿಂದ ತೊಡಗಿಸಿಕೊಂಡಿದ್ದು ಕರ್ನಾಟಕದ ಶೈಕ್ಷಣಿಕ ವಲಯದಲ್ಲಿ ವಿಶಿಷ್ಟವಾಗಿ ಗುರುತಿಸಲ್ಪಟ್ಟಿದೆ.
ಇದೀಗ ದಿಶಾ ಭಾರತ್ ಸಂಸ್ಥೆಯು ದೇಶದ 74ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 1 ರಿಂದ 15 ವರೆಗೆ 15 ದಿನಗಳ ರಾಜ್ಯಮಟ್ಟದ ನಮ್ಮ ಭಾರತ (My Bharat) ಎಂಬ ಆನ್ಲೈನ್ ಯುವ ಅಭಿಯಾನವನ್ನು ಅಯೋಜಿಸಿದೆ.
ಪ್ರತಿನಿತ್ಯ ಬೆಳಗ್ಗೆ 11 ರಿಂದ ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಕಥಾಮಾಲಿಕೆ, ರಾಷ್ಟ್ರೀಯ ವಿಚಾರಗಳ ಕುರಿತು ಭಾಷಣ, ದೇಶಭಕ್ತಿಗೀತೆಗಳ ಗಾಯನ, ಸಾಮಾಜಿಕ ವಿಷಯಗಳ ಕುರಿತು ಏಕಪಾತ್ರಾಭಿನಯ, ರಾಷ್ಟ್ರಭಾವ ಜಾಗರಣದ ನೃತ್ಯಗಳು ಸೇರಿದಂತೆ ವಿವಿಧ ಚಟುವಟಿಕೆಗಳು ಮೂಡಿಬರಲಿವೆ.
ಪ್ರತಿನಿತ್ಯ ಸಂಜೆ 6 ಕ್ಕೆ ಉಪನ್ಯಾಸ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ವಿಷಯತಜ್ಞರಿಂದ ಭಾರತದ ಸ್ವಾತಂತ್ರ್ಯ ಸಂಗ್ರಾಮ, ಸ್ವಾತಂತ್ರ್ಯೋತ್ತರ ಭಾರತ, ಭವಿಷ್ಯದ ಭಾರತ, ಇತ್ಯಾದಿ ವಿವಿಧ ವಿಷಯಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳು ಪ್ರಸಾರಗೊಳ್ಳಲಿವೆ. ಈ ಎಲ್ಲಾ ಕಾರ್ಯಕ್ರಮಗಳು ಆನ್ಲೈನ್ ಮೂಲಕ ನಡೆಯಲಿದ್ದು ದಿಶಾ ಭಾರತ್ ಫೇಸ್ಬುಕ್ ಪೇಜ್ www.facebook.com/DishaBharat ಮೂಲಕ ನೇರ ಪ್ರಸಾರವಾಗಲಿದೆ.
ರಾಜ್ಯಮಟ್ಟದ ನಮ್ಮ ಭಾರತ (My Bharat) ಆನ್ಲೈನ್ ಯುವ ಅಭಿಯಾನವನ್ನು ಖ್ಯಾತ ಯುವ ಅಭಿನೇತ್ರಿ ಪ್ರಣೀತಾ ಸುಭಾಷ್ ಉದ್ಘಾಟಿಸಿದರು. ದಿಶಾ ಭಾರತ್ ಸಂಸ್ಥೆಯ ವಿ. ನಾಗರಾಜ್, ಡಾ. ಎನ್. ವಿ. ರಘುರಾಮ್, ರೇಖಾ ರಾಮಚಂದ್ರನ್, ಪರಿಮಳಾ ಮೂರ್ತಿ, ರಾಜೇಶ್ ಪದ್ಮಾರ್ ಉಪಸ್ಥಿತರಿದ್ದರು.
ಈ ಯುವ ಅಭಿಯಾನಕ್ಕೆ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್, ಸ್ಮೃತಿ ಇರಾನಿ, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಯುವ ಸಂಸದ ತೇಜಸ್ವಿ ಸೂರ್ಯ, ಅನೇಕ ಶಿಕ್ಷಣ ತಜ್ಞರು, ಉಪಕುಲಪತಿಗಳು, ಪ್ರಾಧ್ಯಾಪಕರು ಶುಭಹಾರೈಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.