ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆಯೇ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲಿಷ್ ಪತ್ರಿಕೆ ಮತ್ತು ಎಸೆಸೆಲ್ಸಿ ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರ್ಕಾರ ಇದೀಗ ಸಿಇಟಿ ಪರೀಕ್ಷೆ ನಡೆಸಲು ತಯಾರಿ ನಡೆಸುತ್ತಿದೆ.
ರಾಜ್ಯದಲ್ಲಿ ಸಿಇಟಿ ಪರೀಕ್ಷೆಗೆ ಈ ಮೊದಲೇ ನಿಗದಿ ಮಾಡಲಾಗಿದ್ದ ಪ್ರಕಾರ ಜುಲೈ 30 ಮತ್ತು 31 ರಂದು ಸಿಇಟಿ ಪರೀಕ್ಷೆಗಳನ್ನು ನಡೆಸಲಾಗುವುದಾಗಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಅವರು ಟ್ವೀಟರ್ ಮೂಲಕ ಮಾಹಿತಿ ನೀಡಿದ್ದಾರೆ. ಆಗಸ್ಟ್ 1 ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದೂ ತಿಳಿಸಿದ್ದಾರೆ. @DHFWKA ಹೊರತಂದಿರುವ SOP ಪ್ರಕಾರ ಪರೀಕ್ಷೆಗಳನ್ನು ನಡೆಸಲಿರುವುದಾಗಿಯೂ ತಿಳಿಸಿದ್ದಾರೆ.
ಇನ್ನು ಪಿಜಿಸಿಇಟಿ, ಡಿಪ್ಲೊಮಾ ಸಿಇಟಿ ಪರೀಕ್ಷೆಗಳ ಬಗ್ಗೆಯೂ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಅಶ್ವತ್ಥ್ ನಾರಾಯಣ್ ಅವರು, ಅಂತಿಮ ಪರೀಕ್ಷೆಗಳು ನಡೆಯದೇ ಇರುವ ಹಿನ್ನೆಲೆಯಲ್ಲಿ ಮುಂದೂಡಿರುವುದಾಗಿಯೂ ತಿಳಿಸಿದ್ದಾರೆ. ಆಗಸ್ಟ್ 8 ಮತ್ತು 9 ರಂದು ನಿಗದಿಯಾಗಿದ್ದ ಪಿಜಿಸಿಇಟಿ ಮತ್ತು ಆಗಸ್ಟ್ 9 ರಂದು ನಿಗದಿಯಾಗಿದ್ದ ಡಿಪ್ಲೊಮಾ ಸಿಇಟಿ ಪರೀಕ್ಷೆ ಗಳನ್ನು ಮುಂದೂಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.