ಹೈದರಾಬಾದ್: ಕಳೆದ ತಿಂಗಳು ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಚೀನಾದ ಸೈನ್ಯದೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಹುತಾತ್ಮರಾದ ಕರ್ನಲ್ ಸಂತೋಷ್ ಬಾಬು ಅವರ ಪತ್ನಿ ಸಂತೋಷಿ ಅವರನ್ನು ಉಪ ಜಿಲ್ಲಾಧಿಕಾರಿಗಳಾಗಿ ನೇಮಿಸಲಾಗಿದೆ.
ಸಂತೋಷಿ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಪ್ರಗತಿ ಭವನದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ಅವರು ನೇಮಕಾತಿ ಪತ್ರವನ್ನು ಅವರಿಗೆ ಹಸ್ತಾಂತರ ಮಾಡಿದರು.
ಮಾತ್ರವಲ್ಲದೇ, ಹೈದರಾಬಾದಿನಲ್ಲಿ ಕೆಬಿಆರ್ ಸಮೀಪ ಮನೆಯೊಂದನ್ನೂ ಸಂತೋಷಿ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಮನೆಯ ಮೌಲ್ಯ 10 ಕೋಟಿ ರೂಪಾಯಿ ಎಂದು ಹೇಳಲಾಗಿದೆ. 5 ಕೋಟಿ ರೂ. ಪರಿಹಾರವನ್ನೂ ಅವರಿಗೆ ನೀಡಲಾಗಿದೆ.
ಹೈದರಾಬಾದ್ ಅಥವಾ ಅದರ ಸುತ್ತಮುತ್ತಲಿನ ಪ್ರದೇಶದಲ್ಲೇ ಸಂತೋಷಿ ಅವರನ್ನು ಪೋಸ್ಟ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಮತ್ತು ಅವರು ತಮ್ಮ ಕೆಲಸದಲ್ಲಿ ಭದ್ರಗೊಳ್ಳುವವರೆಗೂ ಅವರಿಗೆ ಸಹಾಯ ಮಾಡುವಂತೆ ತಮ್ಮ ಕಾರ್ಯದರ್ಶಿ ಸ್ಮಿತಾ ಸಭರ್ವಾಲ್ ಅವರಿಗೆ ನಿರ್ದೇಶನ ನೀಡಿದರು.
ಆರಂಭದಲ್ಲಿ ಸಂತೋಷಿ ಅವರು ವಾಣಿಜ್ಯ ತೆರಿಗೆ ಅಧಿಕಾರಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು, ಬಳಿಕ ಡೆಪ್ಯೂಟಿ ಕಲೆಕ್ಟರ್ ಹುದ್ದೆಯನ್ನು ಆಯ್ಕೆ ಮಾಡಿಕೊಂಡರು. ಅವರ ಮನವಿಯನ್ನು ತೆಲಂಗಾಣ ಸರ್ಕಾರ ಸ್ವೀಕಾರ ಮಾಡಿತು ಎಂದು ಮೂಲಗಳು ತಿಳಿಸಿವೆ.
ಪ್ರಗತಿ ಭವನದಲ್ಲಿ ಹುತಾತ್ಮ ಕರ್ನಲ್ ಅವರ 20 ಕುಟುಂಬ ಸದಸ್ಯರಿಗೆ ಸಿಎಂ ಔತನಕೂಟವನ್ನೂ ಆಯೋಜನೆಗೊಳಿಸಿದ್ದರು. ಅವರ ಯೋಗಕ್ಷೇಮವನ್ನು ವಿಚಾರಿಸಿದರು ಮತ್ತು ಸರ್ಕಾರ ಸದಾ ವೀರ ಯೋಧನ ಕುಟುಂಬದ ಜೊತೆಗೆ ಇರುತ್ತದೆ ಎಂಬ ಭರವಸೆಯನ್ನು ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.