ರಾಂಚಿ: ಕರೋನವೈರಸ್ ಹರಡುವುದನ್ನು ತಡೆಯುವ ಪ್ರಯತ್ನವಾಗಿ, ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸುವವರಿಗೆ ಭಾರಿ ದಂಡ ವಿಧಿಸುವುದಾಗಿ ಜಾರ್ಖಂಡ್ ರಾಜ್ಯ ಸರ್ಕಾರ ಬುಧವಾರ ಪ್ರಕಟಿಸಿದೆ.
ಜಾರ್ಖಂಡ್ ಸಾಂಕ್ರಾಮಿಕ ರೋಗ ಸುಗ್ರೀವಾಜ್ಞೆ 2020 ಕ್ಕೆ ಸಂಪುಟ ಅನುಮೋದನೆ ನೀಡಿದೆ, ಇದರ ಅಡಿಯಲ್ಲಿ ಸೋಂಕಿನ ಹರಡುವಿಕೆಯನ್ನು ತಡೆಯಲು ಜಾರಿಗೆ ತರಲಾದ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ.
ಸಾಮಾಜಿಕ ಅಂತರದ ನಿಯಮವನ್ನು ಉಲ್ಲಂಘಿಸುವುದು, ಸಾರ್ವಜನಿಕವಾಗಿ ಮುಖಗವಸುಗಳನ್ನು ಧರಿಸದಿರುವುದು, ಕಚೇರಿಗಳು ಮತ್ತು ಅಂಗಡಿಗಳಲ್ಲಿ ಮಾರ್ಗಸೂಚಿಗಳನ್ನು ಮೀರುವುದು, ಸಾರ್ವಜನಿಕವಾಗಿ ಉಗುಳುವುದು ಹೊಸ ಕಾನೂನಿನಡಿಯಲ್ಲಿ ಅಪರಾಧವಾಗಿದೆ. ಇಂತಹವರ ವಿರುದ್ಧ ಕ್ರಮವನ್ನು ಜರುಗಿಸಬಹುದಾಗಿದೆ.
ಸುಗ್ರೀವಾಜ್ಞೆಯನ್ನು ತಂದ ನಂತರ ಮಾತನಾಡಿದ ಜಾರ್ಖಾಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು, ಕಾನೂನಿನಲ್ಲಿ ನಿಬಂಧನೆ ಇದೆ ಮತ್ತು ಕೆಲವೊಮ್ಮೆ ಕಾಲಕಾಲಕ್ಕೆ ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕತೆಯಿದೆ, ಅದಕ್ಕಾಗಿಯೇ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.
ಲಾಕ್ಡೌನ್ಗೆ ಸಂಬಂಧಿಸಿದಂತೆ ಸರ್ಕಾರವು ಕಾಲಕಾಲಕ್ಕೆ ಮಾರ್ಗಸೂಚಿಗಳನ್ನು ಜಾರಿಗೊಳಿಸುತ್ತಿದೆ ಎಂದು ಜಾರ್ಖಂಡ್ ಸಂಪು ಕಾರ್ಯದರ್ಶಿ ಅಜಯ್ ಕುಮಾರ್ ಹೇಳಿದ್ದಾರೆ. ಅದರ ಅನುಸರಣೆಯಲ್ಲಿ ಜನರು ನಿರ್ಲಕ್ಷ್ಯ ವಹಿಸುತ್ತಿರುವುದು ಕಂಡುಬರುತ್ತದೆ, ಆದರೆ ನಿಯಮಗಳನ್ನು ಪಾಲಿಸದವರಿಗೆ ಶಿಕ್ಷೆ ವಿಧಿಸುವ ಕಾಯ್ದೆ ಇಲ್ಲದಿರುವುದರಿಂದ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಸುಗ್ರೀವಾಜ್ಞೆ ತಂದಿದ್ದೇವೆ ಎಂದಿದ್ದಾಎರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.