ಬೆಂಗಳೂರು: ಕೇವಲ ಐದು ವರ್ಷಗಳಲ್ಲೇ 5 ಲಕ್ಷ ಕೋಟಿ ರೂ. ಹೂಡಿಕೆಯಾಗುವ ಮತ್ತು ಸುಮಾರು 20 ಲಕ್ಷಗಳಷ್ಟು ಜನರಿಗೆ ಉದ್ಯೋಗ ಸೃಷ್ಟಿಸುವ ಹೊಸ ಕೈಗಾರಿಕಾ ನೀತಿ 2020-25 ಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವ ಜಗದೀಶ್ ಶೆಟ್ಟರ್, ಈ ಹೊಸ ನೀತಿಯನ್ವಯ ಬೆಂಗಳೂರು ಹೊರತುಪಡಿಸಿದಂತೆ ರಾಜ್ಯದ ಇತರ 2 ನೇ ಹಂತದ ಮತ್ತು 3 ನೇ ಹಂತದ ನಗರಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಲಾಗುತ್ತದೆ. ಹೊಸ ಉದ್ಯಮಗಳನ್ನು ಆರಂಭ ಮಾಡುವವರಿಗೂ ಸರ್ಕಾರ ನೆರವು ನೀಡಲಿದೆ ಎಂದೂ ತಿಳಿಸಿದ್ದಾರೆ. ಜೊತೆಗೆ ಉದ್ಯಮಿಗಳಿಗೆ ಸಬ್ಸಿಡಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿ ಕೊಡಲಾಗುವುದಾಗಿಯೂ ಅವರು ತಿಳಿಸಿದ್ದಾರೆ.
ಹಿಂದುಳಿದ ಜಿಲ್ಲೆ ಮತ್ತು ತಾಲೂಕಿಗೆ ಸಂಬಂಧಿಸಿದಂತೆ ಮೂರು ವಲಯಗಳಲ್ಲಿ ಕೈಗಾರಿಕಾ ಘಟಕಗಳ ಸ್ಥಾಪನೆಗೆ ಅವಕಾಶ ನೀಡಲಾಗುತ್ತದೆ. ಇಂತಹ ಪ್ರದೇಶಗಳಲ್ಲಿ ಉದ್ಯಮ ಆರಂಭಿಸುವವರಿಗೆ ಸರ್ಕಾರದಿಂದ ಅನೇಕ ರಿಯಾಯಿತಿಗಳು, ಸಬ್ಸಿಡಿ ದೊರೆಯಲಿದ್ದು, ಈ ಬಗ್ಗೆ ಮುಖ್ಯಮಂತ್ರಿ ಗಳು ಅಧ್ಯಕ್ಷತೆ ವಹಿಸಿರುವ ಉಪ ಸಮಿತಿ ನಿರ್ಧಾರಗಳನ್ನು ಕೈಗೊಳ್ಳಲಿರುವುದಾಗಿಯೂ ತಿಳಿಸಿದ್ದಾರೆ.
ಇನ್ನು ಈ ಹೊಸ ಕೈಗಾರಿಕಾ ನೀತಿಯ ಅನ್ವಯ ಎಲ್ಲಾ ವಲಯಕ್ಕೆ ಸಂಬಂಧಿಸಿದಂತೆ 70% ಉದ್ಯೋಗಾವಕಾಶ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಸಂಬಂಧಿಸಿದಂತೆ 100% ಉದ್ಯೋಗಾವಕಾಶವನ್ನು ಕನ್ನಡಿಗರಿಗೇ ನೀಡಲಾಗುತ್ತದೆ. ಜೊತೆಗೆ ರಫ್ತಿನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಾಜ್ಯವನ್ನು 3 ನೇ ಸ್ಥಾನಕ್ಕೇರಿಸುವ ನಿಟ್ಟಿನಲ್ಲಿಯೂ ಕೆಲಸ ಮಾಡಲಾಗುತ್ತದೆ ಎಂದು ಶೆಟ್ಟರ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.