ನವದೆಹಲಿ: ಭಾರತ ಮತ್ತು ಚೀನಾದ ನಡುವೆ ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ ಸಂಘರ್ಷವೇರ್ಪಟ್ಟ ನಂತರದಲ್ಲಿ ಚೀನಾದ ವಸ್ತುಗಳ ಬಹಿಷ್ಕಾರ, ಆಪ್ ಗಳ ನಿಷೇಧ ಮೊದಲಾದ ಮೇಜರ್ ಸರ್ಜರಿಯನ್ನು ಕೇಂದ್ರ ಸರ್ಕಾರ ಮಾಡಿದೆ. ಚೀನಾಗೆ ಮತ್ತೊಂದು ಹೊಡೆತ ನೀಡುವ ನಿಟ್ಟಿನಲ್ಲಿಯೂ ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ದೇಶದ ಯಾವುದೇ ಬಿಡ್ಡಿಂಗ್ ಗಳಲ್ಲಿ ಭಾಗವಹಿಸಲು ಚೀನಾಗೆ ಅವಕಾಶ ಇಲ್ಲ ಎಂದು ತಿಳಿಸಿದೆ.
ಭಾರತದ ಗಡಿ ಪ್ರದೇಶವನ್ನು ಹಂಚಿಕೊಂಡಿರುವ ಎಲ್ಲಾ ರಾಷ್ಟ್ರಗಳ ಕಂಪೆನಿಗಳೂ ಭಾರತಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯವಹಾರ ನಡೆಸಿಕೊಳ್ಳುವುದಕ್ಕೂ ಮುನ್ನ ಕೇಂದ್ರ ಸರ್ಕಾರಕ್ಕೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹೊಸ ರಾಜಕೀಯ ಅನುಮತಿಯನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಿದೆ. ಈ ಕುರಿತಂತೆ ಕೇಂದ್ರ ಹಣಕಾಸು ಸಚಿವಾಲಯ ಹೊಸ ಮಾರ್ಗಸೂಚಿಗಳನ್ನೂ ಬಿಡುಗಡೆ ಮಾಡಿದೆ.
ಜಾಗತಿಕವಾಗಿ ವಿರೋಧಿ ಎಂಬಂತೆ ಗುರುತಿಸಿಕೊಂಡಿರುವ ಚೀನಾವನ್ನು ಯಾವುದೇ ರೀತಿಯ ಬಿಡ್ಡಿಂಗ್ ಪ್ರಕ್ರಿಯೆಗಳಿಂದ ಹೊರಗಿಡುವ ನಿಟ್ಟಿನಲ್ಲಿ ಈ ಹೊಸ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಸ್ಪರ್ಧಾತ್ಮಕ ಪ್ರಾಧಿಕಾರಗಳಲ್ಲಿ ದಾಖಲಾತಿ ಮಾಡಿಕೊಂಡಿರುವ ಗಡಿ ಪ್ರದೇಶ ಹಂಚಿಕೊಂಡಿರುವ ದೇಶಗಳ ಕಂಪೆನಿಗಳಷ್ಟೇ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದೂ ಕೇಂದ್ರ ಸರ್ಕಾರ ಈಗಾಗಲೇ ಮಾಹಿತಿ ನೀಡಿದೆ. ಇಂತಹ ಬಿಡ್ಡಿಂಗ್ ಗಳಲ್ಲಿ ಭಾಗವಹಿಸಲು ಭಾರತದ ಗೃಹ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯಗಳ ಕಡ್ಡಾಯ ಅನುಮತಿಯೂ ಮುಖ್ಯವಾಗಿದೆ ಎಂದೂ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಣಕಾಸು ಸಚಿವಾಲಯ ಹೊರಡಿಸಿರುವ ಹೊಸ ಆದೇಶವನ್ನು ಕಡ್ಡಾಯವಾಗಿ ಅನುಸರಿಸುವಂತೆ ವಿದೇಶಗಳ ಜೊತೆಗೆ ಗಡಿ ಹಂಚಿಕೊಂಡಿರುವ ರಾಜ್ಯ ಸರ್ಕಾರಗಳಿಗೂ ಈಗಾಗಲೇ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಭಾರತದ ಕೈಗಾರಿಕಾ ಮತ್ತು ಆಂತರಿಕ ವ್ಯಾಪಾರ ಅಭಿವೃದ್ಧಿ ಇಲಾಖೆ ರಚಿಸಿರುವ ದಾಖಲಾತಿ ಸಮಿತಿ ಇದರ ಸ್ಪರ್ಧಾತ್ಮಕ ಪ್ರಾಧಿಕಾರವಾಗಿದ್ದು, ಭದ್ರತಾ ಪ್ರಾಧಿಕಾರದ ಅನುಮತಿ ಪಡೆಯದೆ ಚೀನಾ ಭಾರತದ ಯಾವುದೇ ಯೋಜನೆಗಳ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅವಕಾಶವನ್ನು ಪಡೆದಿಲ್ಲ. ಚೀನಾ ಸೇರಿದಂತೆ ಭಾರತದೊಂದಿಗೆ ಗಡಿ ಹಂಚಿಕೆ ಮಾಡಿಕೊಂಡಿರುವ ಎಲ್ಲಾ ದೇಶಗಳಿಗೂ ಈ ಷರತ್ತುಗಳು ಅನ್ವಯವಾಗುವುದಾಗಿಯೂ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.