ಮಂಗಳೂರು: ನಿಷೇಧಿತ ಸ್ಯಾಟಲೈಟ್ ಫೋನ್ ನೆಟ್ವರ್ಕ್ಗಳು ಕರಾವಳಿ ಜಿಲ್ಲೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಕುರಿತು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ.
ಇಂತಹ ಸಿಗ್ನಲ್ಗಳನ್ನು ʼರಾʼ ಪತ್ತೆ ಹಚ್ಚಿದ್ದು, ಮೂರು ದಿನಗಳ ಹಿಂದಷ್ಟೇ ಧರ್ಮಸ್ಥಳದ ಬೇಳಾಲು, 15 ದಿನಗಳ ಹಿಂದೆ ಬೆಳ್ತಂಗಡಿ ಠಾಣಾ ವ್ಯಾಪ್ತಿಯ ಕಿಲ್ಲೂರು, ಕಾರ್ಕಳದ ಬಜಗೋಳಿ ಪ್ರದೇಶಗಳಲ್ಲಿ ಇಂತಹ ಸ್ಯಾಟಲೈಟ್ ಫೋನ್ಗಳು ಸಂಪರ್ಕ ಸಾಧಿಸಲು ಪ್ರಯತ್ನಗಳನ್ನು ನಡೆಸುತ್ತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಕಳೆದ 6 ದಿನಗಳಲ್ಲಿ ಕೊರಿಯಾ ಮೂಲದ ತುರಾಯಾ ಬ್ರ್ಯಾಂಡ್ನ ಸ್ಯಾಟಲೈಟ್ ಫೋನ್ಗಳು ನಿರಂತರ ಸಂಪರ್ಕ ಸಾಧಿಸಲು ಪ್ರಯತ್ನ ನಡೆಸುತ್ತಿರುವುದಾಗಿಯೂ ಗುಪ್ತಚರ ಇಲಾಖೆ ತಿಳಿಸಿದೆ. ಕಳೆದ ವರ್ಷ ಬೆಳ್ತಂಗಡಿ ತಾಲೂಕಿನ ಗೋವಿಂದೂರಿನಲ್ಲಿಯೂ ಇಂತಹ ವಿಚಾರಗಳು ಬೆಳಕಿಗೆ ಬಂದಿರುವುದಾಗಿ ತಿಳಿದು ಬಂದಿದೆ. ಸದ್ಯ ಈ ಪ್ರಕರಣವನ್ನು ಗುಪ್ತಚರ ಇಲಾಖೆಯ ಅಧಿಕಾರಿಗಳು ಮತ್ತು ಆಂತರಿಕ ಭದ್ರತಾ ಇಲಾಖೆಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಎಂದು ಮೂಲಗಳು ತಿಳಿಸಿವೆ.
2008ರ ಮುಂಬೈ ದಾಳಿಯ ಸಂದರ್ಭದಲ್ಲಿ ಇಂತಹ ಫೋನ್ಗಳ ಬಳಕೆ ಕಂಡು ಬಂದಿದ್ದು, ಬಳಿಕ ಇಂತಹ ಫೋನ್ಗಳನ್ನು ಭಾರತದಲ್ಲಿ ನಿಷೇಧಿಸಲಾಗಿತ್ತು. ಇದೀಗ ಮತ್ತೆ ಅಂತಹದ್ದೇ ಘಟನೆಗಳು ಬೆಳಕಿಗೆ ಬಂದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆದರೆ ಇಂತಹ ಯಾವುದೇ ಮಾಹಿತಿಗಳು ತಮ್ಮ ಗಮನಕ್ಕೆ ಬಂದಿಲ್ಲ ಎಂದು ನಕ್ಸಲ್ ನಿಗ್ರಹ ಪಡೆಯ ಅಧಿಕಾರಿಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.