ನವದೆಹಲಿ: ಐಎಎನ್ಎಸ್-ಸಿವೋಟರ್ ಕೋವಿಡ್ -19 ಸಮೀಕ್ಷೆ ಪ್ರಕಾರ, ನರೇಂದ್ರ ಮೋದಿ ಸರ್ಕಾರವು ಭಾರತದಲ್ಲಿನ ಕೋವಿಡ್ -19 ಪರಿಸ್ಥಿತಿಯನ್ನು ನಿಭಾಯಿಸಿದ ರೀತಿಗೆ ಜನರಿಂದ ದೊಡ್ಡ ಪ್ರಮಾಣದಲ್ಲಿ ಅನುಮೋದನೆಯನ್ನು ಪಡೆದುಕೊಂಡಿದೆ. ಸಮೀಕ್ಷೆಗೆ ಪ್ರತಿಕ್ರಿಯಿಸಿದವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಜನರು ಸರ್ಕಾರ ಬಿಕ್ಕಟ್ಟನ್ನು ಎದುರಿಸುತ್ತಿರುವ ರೀತಿಗೆ ಸಕಾರಾತ್ಮಕ ಸ್ಪಂದನೆಯನ್ನು ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.
1,723 ಜನರನ್ನು ಒಳಗೊಂಡ ಸಮೀಕ್ಷೆಯ ಪ್ರಕಾರ, ಶೇಕಡಾ 77.3 ರಷ್ಟು ಜನರು ಸರ್ಕಾರವು ಬಿಕ್ಕಟ್ಟನ್ನು ಉತ್ತಮವಾಗಿ ನಿಭಾಯಿಸುತ್ತಿದೆ ಎಂದು ಒಪ್ಪಿದ್ದಾರೆ ಮತ್ತು ಕೋವಿಡ್ -19 ಅನ್ನು ನಿಭಾಯಿಸಿದ ಬಗ್ಗೆ ಮೋದಿ ನೇತೃತ್ವದ ಸರ್ಕಾರದ ಕ್ರಮಗಳನ್ನು ಅನುಮೋದಿಸಿದ್ದಾರೆ. 19.1% ರಷ್ಟು ಜನರು ಸರ್ಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದರೆ ಕುಸಿಯುತ್ತಿರುವ ಆರ್ಥಿಕತೆ ಜನರಲ್ಲಿ ಆತಂಕವನ್ನು ಸೃಷ್ಟಿಸಿದೆ ಎಂಬುದು ಸಮೀಕ್ಷೆಯಿಂದ ತಿಳಿದು ಬಂದಿದೆ. ಎಪ್ರಿಲ್-ಜೂನ್ ತಿಂಗಳಲ್ಲಿ ಮೋದಿ ಸರ್ಕಾರದ ಕ್ರಮಗಳಿಗೆ ಜನರ ಅನುಮೋದನೆ ಪ್ರಮಾಣ 90% ಮತ್ತು 80% ಇತ್ತು.
ಏರುತ್ತಿರುವ ಕೊರೋನಾ ಪ್ರಕರಣಗಳು ಕೂಡ ಜನರಲ್ಲಿ ಆತಂಕವನ್ನು ಮೂಡಿಸಿದೆ. ಶೇ. 60%ರಷ್ಟು ಜನರು ತಮಗೂ ಕೊರೋನಾ ಬರಬಹುದು ಎಂಬ ಆತಂಕವನ್ನು ಹೊರಹಾಕಿದ್ದಾರೆ. ಶೇ.49.3% ಜನರು ಕೊರೋನಾ ಆತಂಕವನ್ನು ವೈಭವೀಕರಿಸಲಾಗುತ್ತಿದೆ ಎಂದು ಅಭಿಪ್ರಾಯಿಸಿದ್ದಾರೆ.
ಲಾಕ್ಡೌನ್ಗಳ ಹೊಸ ಅನುಭವದೊಂದಿಗೆ, ಜನರು ದಿನಸಿ ಮತ್ತು ಪಡಿತರವನ್ನು ಸಂಗ್ರಹಿಸುವ ಬಗ್ಗೆ ಹೆಚ್ಚು ಜಾಗರೂಕರಾಗಿದ್ದಾರೆ. ಒಟ್ಟು 54.3 ರಷ್ಟು ಜನರು ಮೂರು ವಾರಗಳಿಗೆ ಬೇಕಾಗುವಷ್ಟು ಪಡಿತರವನ್ನು ಹೊಂದಿದ್ದೇವೆ ಎಂದು ಹೇಳಿದರೆ, 44.7 ರಷ್ಟು ಜನರು ಮೂರು ವಾರಗಳಿಗಿಂತ ಕಡಿಮೆ ಪಡಿತರವನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.