ಬೆಂಗಳೂರು: ಕೊರೋನಾ ಕರಿ ನೆರಳು ರಾಜ್ಯದ ಸರ್ಕಾರಿ ಸಾರಿಗೆ ಸಂಸ್ಥೆ ಕೆಎಸ್ಆರಟಿಸಿಗೂ ತಟ್ಟಿದೆ. ಲಾಕ್ಡೌನ್ ನಂತರದಲ್ಲಿ ನಿರೀಕ್ಷಿತ ಪ್ರಮಾಣದ ಆದಾಯವಿಲ್ಲದೆ ಪರದಾಡುವ ಸ್ಥಿತಿ ಸಾರಿಗೆ ಇಲಾಖೆಗೂ ಬಂದಿದೆ. ಕೋಟ್ಯಂತರ ರೂ. ನಷ್ಟದ ನಡುವೆ, ಪ್ರಯಾಣಿಕರ ಕೊರತೆ ಇದ್ದಾಗ್ಯೂ ಬಸ್ಸುಗಳನ್ನು ರಸ್ತೆಗಿಳಿಸಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಇದರಿಂದಾಗಿ ಸಿಬ್ಬಂದಿಗಳಿಗೆ ವೇತನ ನೀಡುವುದಕ್ಕೂ ಸಮಸ್ಯೆ ಎದುರಾಗಿದ್ದು, ಜೂನ್ ಮತ್ತು ಜುಲೈ ತಿಂಗಳ ವೇತನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಸಾರಿಗೆ ಇಲಾಖೆಯ 4 ವಿಭಾಗಗಳಾದ ಕೆಎಸ್ಆರ್ಟಿಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ಸಾರಿಗೆಗಳು ನಷ್ಟದಲ್ಲಿದ್ದು, ನೌಕರರ ಜೂನ್ ಮತ್ತು ಜುಲೈ ತಿಂಗಳ ಸಂಬಳಕ್ಕಾಗಿ ರಾಜ್ಯ ಸರ್ಕಾರ 426 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿದೆ. ಸಾರಿಗೆ ನೌಕರರಿಗೆ ಕೂಡಲೇ ವೇತನ ಬಿಡುಗಡೆ ಮಾಡಬೇಕೆಂಬ ಬೇಡಿಕೆಗೆ ಸ್ಪಂಧಿಸಿರುವ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ.
ಜೂನ್ ತಿಂಗಳಿನಿಂದ ಸೆಪ್ಟೆಂಬರ್ವರೆಗೆ ಅಂದರೆ ಒಟ್ಟು ನಾಲ್ಕು ತಿಂಗಳ ಸಂಬಳವನ್ನು ನೌಕರರಿಗೆ ಸರಿಯಾಗಿ ನೀಡುವುದಕ್ಕೂ ಸರ್ಕಾರದ ಈ ಅನುದಾನದಿಂದ ಅನುಕೂಲವಾಗಲಿದೆ. ಸಾರಿಗೆ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.